ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆ ಶಿವಕುಮಾರ್​ ಬೆಂಗಾವಲು​​ ವಾಹನ ಪಲ್ಟಿ

ಎಸ್ಕಾರ್ಟ್ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಎಸ್ಕಾರ್ಟ್ ವಾಹನ ಡಿಸಿಎಂ ಡಿಕೆ ಶಿವಕುಮಾರ್ ಅವರು ಕುಳಿತಿದ್ದ ಕಾರನ್ನು ಹಿಂಬಾಲಿಸುತ್ತಿತ್ತು.;

Update: 2025-07-19 11:17 GMT

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ.

ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ವಾಪಸ್​​ ಬೆಂಗಳೂರಿಗೆ ಬರುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬೆಂಗಾವಲು (Escort) ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಇಬ್ಬರು ಬೆಂಗಾವಲು ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಟಿಎಂ ಹೊಸೂರು ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ಸಾಧನಾ ಸಮಾವೇಶ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಡಿಕೆ ಶಿವಕುಮಾರ್‌ ಬೆಂಗಾವಲು ವಾಹನದಲ್ಲಿ ತೆರಳುತ್ತಿದ್ದ ಎಸ್ಕಾರ್ಟ್ ಸಿಬ್ಬಂದಿ ಇದ್ದ ವಾಹನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಎಸ್ಕಾರ್ಟ್ ವಾಹನ ಡಿಸಿಎಂ ಡಿಕೆ ಶಿವಕುಮಾರ್ ಅವರು ಕುಳಿತಿದ್ದ ಕಾರನ್ನು ಹಿಂಬಾಲಿಸುತ್ತಿತ್ತು. ಪಲ್ಟಿಯಾದ ವಾಹನ ಹಿಂದೆ ಕಾರಣ ಅದೃಷ್ಟವಶಾತ್ ಡಿಕೆಶಿ ಕಾರಿಗೆ ಯಾವ ಸಮಸ್ಯೆಯೂ ಆಗಿಲ್ಲ. ಘಟನೆ ಬಳಿಕ ಡಿಕೆ ಶಿವಕುಮಾರ್ ಅವರು ಬೆಂಗಳೂರಿಗೆ ಪ್ರಯಾಣ ಮುಂದುವರೆಸಿದ್ದಾರೆ.

Tags:    

Similar News