Exclusive Interview : ಐದು ಹುಲಿಗಳಿಗೆ ವಿಷ ಇಟ್ಟವರು ಯಾರು? ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಮಾಹಿತಿಗಳೇನು?

ಹುಲಿಗಳಿಗೆ ವಿಷ ಇಟ್ಟು ಸಾಯಿಸಿರುವ ಹಿನ್ನೆಲೆಯಲ್ಲಿ ದ ಫೆಡರಲ್ ಕರ್ನಾಟಕಕ್ಕೆ ವಿಶೇಷ ಸಂದರ್ಶನ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಪ್ರಕರಣದ ಕುರಿತು ಹಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.;

Update: 2025-06-28 14:19 GMT

vಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಘಟನೆ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದೆ. ಈ ಬಗ್ಗೆ ಸಂಪೂರ್ಣ ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.

ಹುಲಿಗಳ ಸಾವಿನ ಸ್ಥಳಕ್ಕೆ ಖುದ್ದು ಭೇಟಿ ನೀಡಿ, ಹುಲಿಗಳ ಸಂಸ್ಕಾರ ಕಾರ್ಯದಲ್ಲಿ ಭಾಗಿಯಾಗಿದ್ದ ಸಚಿವ ಈಶ್ವರ್ ಖಂಡ್ರೆ, 'ದ ಫೆಡರಲ್ ಕರ್ನಾಟಕ'ದೊಂದಿಗಿನ ವಿಶೇಷ ಸಂದರ್ಶನ ನೀಡಿ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ.

Full View

"ಹುಲಿಗಳ ಸಾವಿನ ಪ್ರಕರಣ ನನಗೆ ಆಘಾತ ತಂದಿದೆ. ಪ್ರಾಥಮಿಕ ತನಿಖೆಯಲ್ಲಿ ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ. ಸಂಪೂರ್ಣ ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ತಪ್ಪಿತಸ್ಥ ಅಧಿಕಾರಿಗಳಿದ್ದರೆ ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು," ಎಂದು ಅವರು ಮಾಹಿತಿ ನೀಡಿದರು.

ತಮಿಳುನಾಡಿನಿಂದ ಮಲೆ ಮಹದೇಶ್ವರ ವನ್ಯಜೀವಿ ಧಾಮಕ್ಕೆ ಮೇವಿಗಾಗಿ ಹಸುಗಳು ಬರುತ್ತಿರುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಸಚಿವರು ಇದೇ ವೇಳೆ ವಿವರಿಸಿದರು. " ತಮಿಳುನಾಡಿನಿಂದ ಹಸುಗಳು ಬರುತ್ತಿರುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಅಂತೆಯೇ ಮಾನವ-ಪ್ರಾಣಿ ಸಂಘರ್ಷ ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು," ಎಂದು ಖಂಡ್ರೆ ಭರವಸೆ ನೀಡಿದರು.

ಐಪಿಎಸ್ ಅಧಿಕಾರಿಗಳು ಬೆಂಗಳೂರಿನಿಂದ ಅರಣ್ಯ ಪ್ರದೇಶಕ್ಕೆ ತೆರಳದೇ ಇರುವ ಬಗ್ಗೆ ಕೇಳಿದ ಪ್ರಶ್ನೆಗೆ, "ಅಧಿಕಾರಿಗಳು ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ," ಎಂದು ಸಚಿವರು ಸ್ಪಷ್ಟಪಡಿಸಿದರು. ಆನೆಗಳ ಸಂಘರ್ಷ ತಡೆಗಟ್ಟಲು ಆನೆ ಕಾರಿಡಾರ್‌ಗಳನ್ನು ನಿರ್ಮಿಸಲಾಗಿದ್ದರೂ, ಈ ಸಮಸ್ಯೆ ಮುಂದುವರಿದಿರುವುದರ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

ಅರಣ್ಯ ವಿಸ್ತರಣೆಗೆ ಖಾಸಗಿ ಭೂಮಿ ಖರೀದಿ ಪ್ರಸ್ತಾಪ

ರಾಜ್ಯದಲ್ಲಿ ಅರಣ್ಯ ಭೂಮಿಯ ವಿಸ್ತರಣೆಗಾಗಿ ಖಾಸಗಿ ಭೂಮಿಯನ್ನು ಖರೀದಿಸುವ ಪ್ರಸ್ತಾಪವನ್ನು ಸಚಿವ ಈಶ್ವರ್ ಖಂಡ್ರೆ ಮಂಡಿಸಿದ್ದಾರೆ. "ಅರಣ್ಯದ ಪಕ್ಕದಲ್ಲಿರುವ ಖಾಸಗಿ ಜಮೀನು ಮಾಲೀಕರು ಭೂಮಿಯನ್ನು ಮಾರಾಟಕ್ಕೆ ಸಿದ್ಧರಿದ್ದಾರೆ. ರಾಜ್ಯಾದ್ಯಂತ ಸುಮಾರು 10,000 ಎಕರೆಗೂ ಹೆಚ್ಚು ಖಾಸಗಿ ಭೂಮಿಯನ್ನು ಅರಣ್ಯಕ್ಕೆ ಸೇರಿಸಲು ಒಪ್ಪಿಗೆ ಇದೆ. ಆದರೆ, ಇದಕ್ಕೆ ಹಣಕಾಸಿನ ಲಭ್ಯತೆ ಅಗತ್ಯವಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ," ಎಂದು ಖಂಡ್ರೆ ಮಾಹಿತಿ ನೀಡಿದರು. 

Tags:    

Similar News