ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಪರಿಶೀಲನೆ ನಡೆಸಿದ ಸಚಿವ ಕೆ.ಹೆಚ್.ಮುನಿಯಪ್ಪ

ಎಲ್ಲಾ ಪರಿಶಿಷ್ಟ ಜಾತಿಯ 101 ಸಮುದಾಯದವರು ತಪ್ಪದೇ ಮೂಲಜಾತಿಯನ್ನು ನಮೂದಿಸುವ ಮೂಲಕ ಅವಕಾಶಗಳಿಂದ ವಂಚಿತರಾಗದಿರಲು ಕೆ.ಎಸ್‌ ಮುನಿಯಪ್ಪ ಮನವಿ ಮಾಡಿದರು.;

Update: 2025-06-26 12:50 GMT

ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಗ್ರಾಮಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಗುರುವಾರ ಯಲಹಂಕ ತಾಲೂಕಿನ ಪ್ರಮುಖ ಬಡಾವಣೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದರು.

ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗದ ನಿರ್ದೇಶನದಂತೆ ಸರ್ಕಾರವು ನಿರ್ದಿಷ್ಟ ದತ್ತಾಂಶಗಳ ಸಂಗ್ರಹಣೆಗಾಗಿ ಪರಿಶಿಷ್ಟ ಜಾತಿಯ 101 ಜಾತಿಗಳ ಮೂಲಜಾತಿಗಳ   ಸಮೀಕ್ಷಯನ್ನು ಮೇ 6 ರಿಂದ ನಡೆಸಲಾಗುತ್ತಿದೆ. ಜೂನ್ 30ಕ್ಕೆ ಅಂತ್ಯ ಗೊಳ್ಳುತ್ತಿದ್ದು, ಸಚಿವರು   ಖುದ್ದಾಗಿ ಯಲಹಂಕ ತಾಲೂಕಿನ ಅರಕೆರೆ ಬಡಾವಣೆ, ಸುರದೇನಪುರ,ಎಂ.ಎಸ್ ಪಾಲ್ಯ, ಬೆಟ್ಟಹಳ್ಳಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮೂಲ ಜಾತಿಗಳನ್ನು ನಮೂದಿಸಲು ನಾಗರಿಕರಿಗೆ ಮನವಿ ಮಾಡಿದರು.

ಎಲ್ಲಾ ಪರಿಶಿಷ್ಟ ಜಾತಿಯ 101 ಸಮುದಾಯದವರು ತಪ್ಪದೇ ಮೂಲಜಾತಿಯನ್ನು ನಮೂದಿಸುವ ಮೂಲಕ ಅವಕಾಶಗಳಿಂದ ವಂಚಿತರಾಗದಿರಲು ಮನವಿ ಮಾಡಿದರು.

Tags:    

Similar News