ರಾಜಕೀಯ ಒತ್ತಡದಿಂದ ಸಿಎಂ ವಿರುದ್ಧ‌ ಆದೇಶ ಹೊರಡಿಸಿದ ರಾಜ್ಯಪಾಲರು: ಜಮೀರ್‌ ಅಹ್ಮದ್‌

Update: 2024-08-17 07:05 GMT

ರಾಜ್ಯಪಾಲರಿಗೆ ಪೊಲಿಟಿಕಲ್‌ ಪ್ರಷರ್‌ ಇರುವುದರಿಂದಾಗಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆದೇಶ ಹೊರಡಿಸಿದ್ದಾರೆ ಎಂದು ಸಚಿವ ಜಮೀರ್‌ ಅಹ್ಮದ್‌  ಆರೋಪಿಸಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲರ ವಿರುದ್ಧ ಇಡೀ ಕಾಂಗ್ರೆಸ್‌ ಪಾಳಯವೇ ಮುಗಿಬಿದ್ದಿದ್ದು, ಇದೀಗ ಜಮೀರ್‌ ಅಹ್ಮದ್‌ ಅವರು ಪ್ರತಿಕ್ರಿಯಿಸಿದ್ದು, ʻʻರಾಜ್ಯಪಾಲರಿಗೆ ರಾಜಕೀಯ ಒತ್ತಡ ಇರುವುದರಿಂದಾಗಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆದೇಶ ಹೊರಡಿಸಿದ್ದಾರೆʼʼ ಎಂದು ಹೇಳಿದ್ದಾರೆ.

ʻʻಮುಡಾ ಹಗರಣ ಸಂಬಂಧ ಜೆಡಿಎಸ್‌ ಹಾಗೂ ಬಿಜೆಪಿ ಮಿತ್ರಪಕ್ಷಗಳು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮೈಸೂರು ಚಲೋ ಪಾದಯಾತ್ರೆಯನ್ನು ಹತ್ತು ದಿನಗಳ ಕಾಲ ಮಾಡಿದರೂ ಏನು ಪ್ರಯೋಜವಾಗದ ಹಿನ್ನೆಲೆಯಲ್ಲಿ ಈ ರೀತಿಯ ಷಡ್ಯಂತರ ನಡೆಸಿದ್ದಾರೆʼʼ ಎಂದು ವಾಗ್ದಾಳಿ ನಡೆಸಿದ್ದಾರೆ.

ʻʻನ್ಯಾಯಾಲಯದ ಮೇಲೆ ನಮಗೆ ವಿಶ್ವಾಸವಿದೆ. ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲʼʼ ಎಂದು ಜಮೀರ್‌ ಹೇಳಿದರು.

Tags:    

Similar News