ಕಲಬುರಗಿಯಲ್ಲಿ ಕ್ರೌರ್ಯ | ಗುಂಡಿಕ್ಕಿ ಗ್ರಾ.ಪಂ ಮಾಜಿ ಸದಸ್ಯ ಬರ್ಬರ ಹತ್ಯೆ

Update: 2024-09-14 11:33 GMT
ಕೊಲೆಯಾದ ವಿಶ್ವನಾಥ್​​​ ಜಮಾದಾರ್
Click the Play button to listen to article

ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ನಡೆದಿದೆ.

ವಿಶ್ವನಾಥ್​​​ ಜಮಾದಾರ್ ಗುಂಡಿಗೆ ಬಲಿಯಾದ ವ್ಯಕ್ತಿ. ಮಗನನ್ನು ಶಾಲೆಗೆ ಬಿಟ್ಟು ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ವಿಶ್ವನಾಥ್​​​ ಜಮಾದಾರ್ ಶುಕ್ರವಾರ ಬೆಳಿಗ್ಗೆ ಮಗನನ್ನು ಶಾಲೆಗೆ ಬಿಟ್ಟು ಬರುತ್ತೇನೆ ಅಂತ ಬೈಕ್ ನಲ್ಲಿ ಹೋಗಿದ್ದರು. ಮಗನನ್ನು ಶಾಲೆಗೆ ಬಿಟ್ಟು ಜಿಡಗಾ ಕ್ರಾಸ್ ಬಳಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಿಶ್ವನಾಥ್​ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದಾರೆ.

ವಿಶ್ವನಾಥ್​ ಅವರ ತೆಲೆಗೆ ಮೂರು ಗುಂಡು ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ವಿಶ್ವನಾಥ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಿಶ್ವನಾಥ್​ ಅವರನ್ನು ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ವಿಶ್ಥನಾಥ್​ ಮೃತದೇಹ ಕಂಡ ದಾರಿಹೋಕರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಕೂಡಲೇ ಆಳಂದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.

ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಕೂಡ ಸ್ಥಳಕ್ಕೆ ನೀಡಿ ಪರೀಶಿಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಆಳಂದ ಪೊಲೀಸರು, ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.

Tags:    

Similar News