ಕರ್ನಾಟಕ ಜಾತಿ ಗಣತಿ ತಾತ್ಕಾಲಿಕ ಸ್ಥಗಿತ: ಮರು ಲೆಕ್ಕಾಚಾರಕ್ಕೆ ಕಾಂಗ್ರೆಸ್‌ ನಿರ್ಧಾರ; ಜೂನ್‌ 12ರಂದು ಘೋಷಣೆ?

ಜಾತಿ ಗಣತಿ ವರದಿಯ ದತ್ತಾಂಶಗಳ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ವರದಿಯ ಬಿಡುಗಡೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಿವಾದಾಸ್ಪದ ದತ್ತಾಂಶಗಳನ್ನು ಮರು ಪರಿಶೀಲಿಸಲು ಮತ್ತು ಮರು ಎಣಿಕೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ;

Update: 2025-06-10 10:44 GMT

ಕರ್ನಾಟಕದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಜಾತಿ ಗಣತಿ ವರದಿಯ ಜಾರಿಯನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿವೆ. ಗಣತಿ ವೇಳೆ ಪಡೆದ ದತ್ತಾಂಶಗಳ ಮರು ಲೆಕ್ಕಾಚಾರಕ್ಕೆ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು. ಈ ಕುರಿತು ಜೂನ್ 12 ರಂದು ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.  2015ರಲ್ಲಿ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಏಪ್ರಿಲ್ 2025ರಲ್ಲಿ ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ, ಈ ವರದಿಯ ದತ್ತಾಂಶಗಳು ಕೆಲವು ಪ್ರಮುಖ ಸಮುದಾಯಗಳ ಜನಸಂಖ್ಯೆಯನ್ನು ಕಡಿಮೆ ತೋರಿಸಿವೆ ಎಂಬ ಬಗ್ಗೆ ಒಕ್ಕಲಿಗರು, ಲಿಂಗಾಯತರು ಸೇರಿದಂತೆ ಹಲವು ಸಮುದಾಯಗಳು ಹಾಗೂ ನಾಯಕರು ಆರೋಪಿಸಿದ್ದರು.

ಕೆಲವು ಕಾಂಗ್ರೆಸ್ ಸಚಿವರೇ ವರದಿಯ ನಿಖರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರಿಂದ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು. ಅದರ ಪ್ರಕಾರ,

ತಾತ್ಕಾಲಿಕ ಸ್ಥಗಿತ ಮತ್ತು ಮರು ಲೆಕ್ಕಾಚಾರಕ್ಕೆ ನಿರ್ಧಾರ

ಜಾತಿ ಗಣತಿ ವರದಿಯ ದತ್ತಾಂಶಗಳ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ವರದಿಯ ಬಿಡುಗಡೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಿವಾದಾಸ್ಪದ ದತ್ತಾಂಶಗಳನ್ನು ಮರು ಪರಿಶೀಲಿಸಲು ಮತ್ತು ಮರು ಎಣಿಕೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಸುರ್ಜೇವಾಲಾ ಹೇಳಿಕೆಯೇನು?

ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಾತನಾಡಿ, "ಜಾತಿ ಗಣತಿ ವರದಿಯು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಕರ್ನಾಟಕ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ. ಆದರೆ, ದತ್ತಾಂಶಗಳ ನಿಖರತೆಯ ಬಗ್ಗೆ ಉಂಟಾದ ಗೊಂದಲವನ್ನು ತೆರವುಗೊಳಿಸಲು ಸರ್ಕಾರ ಬದ್ಧವಾಗಿದೆ. ಕಾಂಗ್ರೆಸ್​ ಈ ವಿಷಯದಲ್ಲಿ ಪಾರದರ್ಶಕ ನಿರ್ಧಾರ ಕೈಗೊಳ್ಳಲಿದೆ," ಎಂದು ಹೇಳಿದ್ದಾರೆ.

ಜೂನ್ 12ರ ಕ್ಯಾಬಿನೆಟ್ ಸಭೆ ನಿರ್ಣಾಯಕ

ಜೂನ್ 12ವಿಧಾನಸೌಧದಲ್ಲಿ ನಡೆಯಲಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಜಾತಿ ಗಣತಿ ವರದಿಯ ಮರು ಪರಿಶೀಲನೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಸಚಿವರು ತಮ್ಮ ಆಕ್ಷೇಪಣೆಗಳನ್ನು ಲಿಖಿತವಾಗಿ ಸಲ್ಲಿಸಲಿದ್ದಾರೆ.

ಜೂನ್ 12 ರ ಕ್ಯಾಬಿನೆಟ್ ಸಭೆಯಲ್ಲಿ ಜಾತಿ ಗಣತಿಯ ದತ್ತಾಂಶಗಳ ಮರು ಎಣಿಕೆಗೆ ಸಂಬಂಧಿಸಿದ ಸಮಿತಿಯ ರಚನೆ ಅಥವಾ ಪಾರದರ್ಶಕ ಸಮೀಕ್ಷೆಗೆ ಸಂಬಂಧಿಸಿದ ಘೋಷಣೆಯಾಗುವ ಸಾಧ್ಯತೆ ಇದೆ. 

Tags:    

Similar News