ಕೋಮುಲ್ ಚುನಾವಣೆ: ಕೆ.ವೈ. ನಂಜೇಗೌಡ ಆಯ್ಕೆ, ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಕಣ್ಣು?
ಕೋಮುಲ್ಗೆ ನಡೆದ ಚುನಾವಣೆಯಲ್ಲಿ ಶಾಸಕ ಕೆ.ವೈ. ನಂಜೇಗೌಡ ಬೆಂಬಲಿಗರು ಹೆಚ್ಚಾಗಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಅವರೇ ಅಧ್ಯಕ್ಷರಾಗುವ ಅವಕಾಶ ಹೆಚ್ಚಿದೆ ಎಂದು ಹೇಳಲಾಗಿದೆ.;
ಮಾಲೂರು ಶಾಸಕ ಕೆ.ವೈ. ನಂಜೇಗೌಡ
ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಮುಲ್) ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಟೇಕಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಅವರಿಗೆ ಪ್ರತಿಸ್ಪರ್ಧಿ ಯಾರು ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ನಡುವೆ ಬಂಗಾರಪೇಟೆ ಶಾಸಕ ಎಸ್.ಎನ್. ನಾರಯಣಸ್ವಾಮಿ ಚುನಾವಣೆ ಮೂಲಕ ಗೆಲುವು ಸಾಧಿಸಿದ್ದಾರೆ. ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಇವರಿಬ್ಬರ ನಡುವೆ ಪೈಪೋಟಿ ನಡೆಯುವ ಸಾಧ್ಯತೆ ಇದೆ. ಕೋಮುಲ್ಗೆ ನಡೆದ ಚುನಾವಣೆಯಲ್ಲಿ ಕೆ.ವೈ. ನಂಜೇಗೌಡ ಬೆಂಬಲಿಗರು ಹೆಚ್ಚಾಗಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಅವರೇ ಅಧ್ಯಕ್ಷರಾಗುವ ಅವಕಾಶ ಹೆಚ್ಚಿದೆ ಎಂದು ಹೇಳಲಾಗಿದೆ.
ಒಟ್ಟು 13 ನಿರ್ದೇಶಕರು ಆಯ್ಕೆಯಾಗಿದ್ದಾರೆ. ಇವರಲ್ಲಿ ಒಬ್ಬರು ಕೋಮುಲ್ಗೆ ಅಧ್ಯಕ್ಷರಾಗಲಿದ್ದಾರೆ. ಶಾಸಕ ಕೆ.ವೈ. ನಂಜೇಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು ಬಮೂಲ್ ಅಧ್ಯಕ್ಷ ಮಾಜಿ ಸಂಸದ ಡಿ.ಕೆ. ಸುರೇಶ್ಗೆ ಪ್ರಬಲ ಸ್ಪರ್ಧಿಯಾಗುವ ಸಾಧ್ಯತೆ ಇದೆ. ಬಳ್ಳಾರಿ ಹಾಲು ಒಕ್ಕೂಟಕ್ಕೆ ಮುಂದಿನ ತಿಂಗಳು ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಮಾಜಿ ಶಾಸಕ ಭೀಮಾನಾಯ್ಕ್ ಕಣಕ್ಕಿಳಿಯಲಿದ್ದಾರೆ. ಅವರೂ ಸಹ ಕೆಎಂಎಫ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಕಾಂಗ್ರೆಸ್ನಲ್ಲಿ ಮೂವರು ಆಕಾಂಕ್ಷಿಗಳಿದ್ದು ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ. ಡಿ.ಕೆ. ಸುರೇಶ್ ಅವಿರೋಧವಾಗಿ ಆಯ್ಕೆಯಾಗುವ ಕನಸಿಗೆ ಕೆ.ವೈ. ನಂಜೇಗೌಡ ಹಾಗೂ ಕೆಎಂಎಫ್ ಮಾಜಿ ಅಧ್ಯಕ್ಷ ಭೀಮಾನಾಯ್ಕ್ ಅಡ್ಡಿಯಾಗುವ ಸಾಧ್ಯತೆ ಇದೆ.