Caste census | ಸೋರಿಕೆಯಾದ ಮಾಹಿತಿ ಸುಳ್ಳು ; ವರದಿ ಓದದೇ ಮಾತಾಡುವುದು ಬೇಡ - ಸಚಿವ ಶಿವರಾಜ್ ತಂಗಡಗಿ

ಸೋರಿಕೆಯಾಗಿರುವ ಅಂಕಿ-ಅಂಶ ಸರಿಯಿಲ್ಲ. ಏ. 17ರಂದು ವಿಶೇಷ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೂ ವರದಿ ಪ್ರತಿ ನೀಡುತ್ತೇವೆ. ವರದಿಯನ್ನು ಓದದೆ ಮಾತನಾಡುವುದು ಸರಿಯಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ;

Update: 2025-04-13 15:58 GMT

ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್ ಕಾಂತರಾಜು ನೇತೃತ್ವದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವರದಿ ಬಗ್ಗೆ ವಾಸ್ತವ ಸತ್ಯ ತಿಳಿಯದೆ ಮಾತನಾಡುವುದು ಸರಿಯಲ್ಲ. ಮಾಧ್ಯಮಗಳಲ್ಲಿ ತೋರಿಸುತ್ತಿರುವುದು ತಪ್ಪು ಮಾಹಿತಿ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಧ್ಯಮದವರೊಂದಿಗೆ ಮಾತನಾಡಿದ ಅವರು, ಸೋರಿಕೆಯಾಗಿರುವ ಅಂಕಿ-ಅಂಶ ಸರಿಯಿಲ್ಲ. ಏ. 17ರಂದು ವಿಶೇಷ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೂ ವರದಿ ಪ್ರತಿ ನೀಡುತ್ತೇವೆ. ವರದಿಯನ್ನು ಓದದೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ವರದಿ ಓದಿ ಕೂಲಂಕಷವಾಗಿ ಚರ್ಚೆ ಮಾಡಲಿ. ಅದಕ್ಕಾಗಿ ಮುಖ್ಯಮಂತ್ರಿ ಅವರು ಒಂದು ವಾರ ಸಮಯ ನೀಡಿದ್ದಾರೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ.ಎಲ್ಲಾ ಸಚಿವರಿಗೂ ವರದಿ ಪ್ರತಿ ಕಳುಹಿಸಲಾಗುತ್ತಿದೆ. ವರದಿ ಓದಿ ತಿಳಿದುಕೊಳ್ಳಬೇಕು ಎಂದು ಶಿವರಾಜ ಎಸ್‌.ತಂಗಡಗಿ ಹೇಳಿದ್ದಾರೆ.

ಗಣತಿ ವಾಸ್ತವ ಸತ್ಯ ಯಾರಿಗೂ ಗೊತ್ತಿಲ್ಲ. ಈಗಾಗಲೇ 26 ಮಂತ್ರಿಗಳಿಗೆ ವರದಿ ಪ್ರತಿ ಕಳುಹಿಸಲಾಗಿದೆ. ಎಲ್ಲಾ ಮಂತ್ರಿಗಳಿಗೂ ಪ್ರತಿ ಕಳುಹಿಸಲಾಗುವುದು. ಜಾತಿ ಲೆಕ್ಕ ಹಾಕಲು ಗಣತಿ ಮಾಡಿಲ್ಲ. ಎಲ್ಲ ಸಮುದಾಯಗಳಲ್ಲಿ ವಿದ್ಯಾವಂತರು, ಅವಿದ್ಯಾವಂತರು ಎಷ್ಟಿದ್ದಾರೆ? ಆಸ್ತಿ ಎಷ್ಟಿದೆ? ಬಡವರು ಎಷ್ಟಿದ್ದಾರೆ? ಉದ್ಯೋಗದಲ್ಲಿ ಎಷ್ಟು ಮಂದಿ ಇದ್ದಾರೆ ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಜಾತಿ ಗಣತಿ ಮಾಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇಲ್ಲಿ ನಮಗೆ ಜಾತಿ ಲೆಕ್ಕವಲ್ಲ. ರಾಜ್ಯದ ಪ್ರತಿ ವಿಧಾನಸಭಾವಾರು ಸಮುದಾಯಗಳ ಸ್ಥಿತಿಗತಿ ಕುರಿತ ಮಾಹಿತಿ ಒಳಗೊಂಡ 50 ಸಂಪುಟಗಳ ವರದಿ ಇದೆ. ಈ ವರದಿ ಆಧರಿಸಿ ಎಲ್ಲ ಸಮುದಾಯಗಳ ಬಡವರನ್ನು ಮೇಲೆತ್ತಲು ಯೋಜನೆ ರೂಪಿಸುವುದು ಮುಖ್ಯಮಂತ್ರಿಗಳ ಚಿಂತನೆಯಾಗಿದೆ ಎಂದಿದ್ದಾರೆ.

ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ಯಾರು ಏನು ಮಾಡಿದ್ದಾರೆ. ಸಿಐಡಿ ಯಾರನ್ನೆಲ್ಲಾ ಬಂಧಿಸಿದೆ. ಬಿಜೆಪಿಗರು ಯಾರು ಭಾಗಿಯಾಗಿದ್ದಾರೆ ಎಲ್ಲದರ ಬಗ್ಗೆ ಶೀಘ್ರದಲ್ಲೇ ಮಾಹಿತಿ ಒದಗಿಸುತ್ತೇನೆ. ಈ ಸಂಬಂಧ ಸಂಪೂರ್ಣ ಮಾಹಿತಿ ಪಡೆದು ಬಳಿಕ ಪ್ರತಿಕ್ರಿಯಿಸುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

Tags:    

Similar News