Lokayukta Raid | ಬೆಳ್ಳಂಬೆಳಿಗ್ಗೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ; ದಾಖಲೆ ಪರಿಶೀಲನೆ

ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.;

Update: 2025-05-31 05:47 GMT

ಕರ್ನಾಟಕ ಲೋಕಾಯುಕ್ತ

ರಾಜ್ಯದಲ್ಲಿ ಶನಿವಾರ ಬೆಳ್ಳಂಬೆಳಿಗ್ಗೆ ಹಲವು ಕಡೆ ಭ್ರಷ್ಟ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. 

ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಆಸ್ತಿ-ಪಾಸ್ತಿಗಳ ಬಗ್ಗೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಗದಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಮನೆ, ಕಚೇರಿ ಸೇರಿ 6 ಕಡೆ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಶೋಧ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ, ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದೆ.  

ಕಲಬುರಗಿಯಲ್ಲಿ ಲೋಕಾಯುಕ್ತ ದಾಳಿ

ಬಳ್ಳಾರಿ ಲೋಕೋಪಯೋಗಿ ಇಲಾಖೆ ಸೂಪರಿಂಡೆಂಟ್ ಎಂಜಿನಿಯರ್ ಅಮೀನ್ ಮುಕ್ತಾರ್ ನಿವಾಸದ ಮೇಲೆ ದಾಳಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಕಲಬುರಗಿ ನಗರದ ಹೊರವಲಯದಲ್ಲಿ 25 ಎಕರೆ ಜಮೀನಿನ ಆಸ್ತಿಪತ್ರ, ಕಲಬುರಗಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಪೆಟ್ರೋಲ್ ಬಂಕ್, ಒಂದು ಕ್ರಷರ್ ಮಷೀನ್ ಪರವಾನಗಿ ಸೇರಿ ಇತರೆ ಆಸ್ತಿಪತ್ರಗಳು ಪತ್ತೆಯಾಗಿವೆ.

ಉಡುಪಿಯಲ್ಲೂ ಭ್ರಷ್ಟ ಅಧಿಕಾರಿಗೆ ಶಾಕ್

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಲೆಕ್ಕಾಧಿಕಾರಿ ಗಿರೀಶ್ ರಾವ್ ಮನೆ ಮೇಲೆ ದಾಳಿ ನಡೆದಿದೆ. ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಕಾರ್ಕಳದ ಮನೆ, ಕಚೇರಿ, ಸಂಬಂಧಿಕರ ಮನೆ ಸೇರಿದಂತೆ ಐದು ಕಡೆ ಶೋಧ ಕಾರ್ಯ ನಡೆಯುತ್ತಿದೆ. 

ಧಾರವಾಡದಲ್ಲೂ ಲೋಕಾಯುಕ್ತ ದಾಳಿ

ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್‌ ಎಚ್. ಸುರೇಶ ಮನೆ ಹಾಗೂ ಸರ್ಕಾರಿ ಗೃಹದ ಮೇಲೆ ದಾಳಿ ನಡೆದಿದೆ. ಧಾರವಾಡದ ಡಿಸಿ ಕಾಂಪೌಂಡ್‌ನಲ್ಲಿರುವ ಕಚೇರಿ, ಕೆಸಿಡಿ ವೃತ್ತದ ಬಳಿಯಿರುವ ಮನೆ ಮೇಲೂ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Tags:    

Similar News