ನಟ ಶಿವಣ್ಣನ ವಿರುದ್ಧ ಮಡೆನೂರು ಮನು ಹಗುರ ಮಾತು; ಚಿತ್ರರಂಗದಿಂದ ನಿಷೇಧಕ್ಕೆ ಒತ್ತಾಯ

ಮಡೆನೂರು ಮನು ಮಾತನಾಡಿದ್ದಾರೆ ಎನ್ನಲಾದ ವೈರಲ್ ಆಡಿಯೋದಲ್ಲಿ ಶಿವಣ್ಣ ಇನ್ನೊಂದು ಆರು ವರ್ಷ ಬದುಕುತ್ತಾನೆ, ದರ್ಶನ್ ಈಗಾಗಲೇ ಸತ್ತೇ ಹೋಗಿದ್ದಾನೆ. ಧ್ರುವ ಸರ್ಜಾಗೆ ಇನ್ನು ಎಂಟು ವರ್ಷ ಕ್ರೇಜ್ ಇದ್ದರೆ ಹೆಚ್ಚು, ಈ ಮೂವರ ನಡುವೆ ಕಾಂಪಿಟೇಶನ್ ಕೊಡೋಕೆ ನಿಂತಿರುವ ಗಂಡುಗಲಿ ಕಣ್ರಿ ನಾನು’ ಎಂಬ ಮಾತುಗಳಿದ್ದವು.;

Update: 2025-05-26 12:30 GMT

ಹ್ಯಾಟ್ರಿಕ್‌ ಹಿರೋ ಶಿವರಾಜಕುಮಾರ್ ಹಾಗೂ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕುರಿತು ತುಚ್ಛವಾಗಿ ಮಾತನಾಡಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಮಡೆನೂರು ಮನು ವಿರುದ್ಧ ಶಿವರಾಜ್​ಕುಮಾರ್​  ಹಾಗೂ ದರ್ಶನ್‌ ಅಭಿಮಾನಿಗಳ ಆಕ್ರೋಶ ಜೋರಾಗಿದೆ.

ಮಡೆನೂರು ಮನು ಅವರದ್ದು ಎನ್ನಲಾದ ವೈರಲ್ ಆಡಿಯೋದಲ್ಲಿ ಶಿವಣ್ಣ ಇನ್ನೊಂದು ಆರು ವರ್ಷ ಬದುಕುತ್ತಾನೆ, ದರ್ಶನ್ ಈಗಾಗಲೇ ಸತ್ತೇ ಹೋಗಿದ್ದಾನೆ. ಧ್ರುವ ಸರ್ಜಾಗೆ ಇನ್ನು ಎಂಟು ವರ್ಷ ಕ್ರೇಜ್ ಇದ್ದರೆ ಹೆಚ್ಚು, ಈ ಮೂವರ ನಡುವೆ ಕಾಂಪಿಟೇಶನ್ ಕೊಡೋಕೆ ನಿಂತಿರುವ ಗಂಡುಗಲಿ ಕಣ್ರಿ ನಾನು’ ಎಂಬ ಮಾತುಗಳಿದ್ದವು. 

ಇದು ಶಿವರಾಜ್ ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಮಡೆನೂರು ಮನು ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

ಈಗಾಗಲೇ ಅತ್ಯಾಚಾರ ಆರೋಪ ಹೊತ್ತಿರುವ ಹಾಗೂ ಹಿರಿಯ ನಟರ ಬಗ್ಗೆ ಹಗುರವಾಗಿ ಮಾತನಾಡಿರುವ ಮಡೆನೂರು ಮನುವನ್ನು ಚಿತ್ರರಂಗದಿಂದಲೇ ನಿಷೇಧಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಇದಲ್ಲದೇ ನಿರ್ದೇಶಕರ ಸಂಘ, ನಿರ್ಮಾಪಕರ ಸಂಘಕ್ಕೂ ದೂರು ಸಲ್ಲಿಸಿದ್ದಾರೆ.

ಮಡೆನೂರು ಮನು ನಟಿಸಿದ್ದ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಶುಕ್ರವಾರ ಬಿಡುಗಡೆಯಾಗಿದೆ. ಇದೇ ಹೊತ್ತಿನಲ್ಲಿ ವಿವಾದದ ಕಿಡಿ ಹೊತ್ತಿಕೊಂಡಿದೆ.

ಕಾಮಿಡಿ ಕಿಲಾಡಿಗಳು ಶೋನ ಸಹನಟಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಈಗಾಗಲೇ ಪೊಲೀಸರು ಮಡೆನೂರು ಮನುವನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

 ನ್ಯಾಯಾಂಗ ಬಂಧನ

ಮಡೆನೂರು ಮನುಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಬೆದರಿಕೆ ಆರೋಪಗಳ ಮೇಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನುವನ್ನು ಬಂಧಿಸಿದ್ದರು.

ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ 3ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ 14 ದಿನಗಳ ಕಾಲ ಮಡೆನೂರು ಮನುಗೆ ನ್ಯಾಯಾಂಗ ಬಂಧನ ವಿಧಿಸಿದೆ.

Tags:    

Similar News