Namma Metro| ಭಾನುವಾರ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ವ್ಯತ್ಯಯ
ನೇರಳೆ ಮಾರ್ಗದ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಸಂಚಾರ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ. ಬೈಯಪ್ಪನಹಳ್ಳಿಯಿಂದ ಕಾಡುಗೋಡಿವರೆಗೂ ಸಂಚಾರ ಇರುತ್ತದೆ. ಚಲಘಟ್ಟದಿಂದ ಎಂಜಿ ರಸ್ತೆವರೆಗೂ ಮೆಟ್ರೋ ಸಂಚಾರ ಇರುತ್ತದೆ.;
ನಮ್ಮ ಮೆಟ್ರೋ
ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಭಾನುವಾರ (ಜೂನ್ 22ರಂದು) ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಟ್ರಿನಿಟಿ ಸರ್ಕಲ್ ಮತ್ತು ಹಲಸೂರು ನಡುವೆ ನಿಗದಿತ ನಿರ್ವಹಣಾ ಕಾಮಗಾರಿ ನಡೆಯಲಿದೆ ಎಂದು ಬಿಎಂಆರ್ಸಿಎಲ್ (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ) ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್ 22 ರಂದು ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ನೇರಳೆ ಮಾರ್ಗದ ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ. ಈ ಅವಧಿಯಲ್ಲಿ ಈ ವಿಭಾಗದಲ್ಲಿ ಸೇವೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.
ಇತರೆ ಮಾರ್ಗಗಳಲ್ಲಿ ಎಂದಿನಂತೆ ಸೇವೆ
* ಬೈಯಪ್ಪನಹಳ್ಳಿಯಿಂದ ಕಾಡುಗೋಡಿ (ವೈಟ್ಫೀಲ್ಡ್) ವರೆಗೆ ಮೆಟ್ರೋ ಸಂಚಾರ ಎಂದಿನಂತೆ ಇರುತ್ತದೆ.
* ಚಲಘಟ್ಟದಿಂದ ಎಂ.ಜಿ. ರಸ್ತೆವರೆಗೂ ಮೆಟ್ರೋ ಸಂಚಾರ ಎಂದಿನಂತೆ ಇರುತ್ತದೆ.
* ಹಸಿರು ಮಾರ್ಗದಲ್ಲಿ (ರೇಷ್ಮೆ ಸಂಸ್ಥೆ ರೋಡ್ – ಮಾದಾವರ) ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಸೇವೆಗಳು ನಿಗದಿತ ಸಮಯದಂತೆ ಮುಂದುವರಿಯುತ್ತವೆ.
ಈ ತಾತ್ಕಾಲಿಕ ವ್ಯತ್ಯಯವು ಕೇವಲ ನಿರ್ದಿಷ್ಟ ವಿಭಾಗದ ಮೆಟ್ರೋ ಸಂಚಾರಕ್ಕೆ ಸಂಬಂಧಪಟ್ಟದ್ದಾಗಿದೆ ಎಂದು ಬಿಎಂಆರ್ಸಿಎಲ್ ಸ್ಪಷ್ಟಪಡಿಸಿದೆ.
ಬಿಎಂಆರ್ಸಿಎಲ್ ಮನವಿ:
ಈ ತಾತ್ಕಾಲಿಕ ತೊಂದರೆಗೆ ವಿಷಾದ ವ್ಯಕ್ತಪಡಿಸಿರುವ ಬಿಎಂಆರ್ಸಿಎಲ್, ಪ್ರಯಾಣಿಕರು ತಮ್ಮ ದಿನಚರಿ ಪ್ರವಾಸದ ಯೋಜನೆಯನ್ನು ಮುಂಚಿತವಾಗಿ ರೂಪಿಸಿಕೊಳ್ಳುವಂತೆ ವಿನಂತಿಸಿದೆ. ಸಾರ್ವಜನಿಕರ ತಿಳಿವಳಿಕೆ ಮತ್ತು ಸಹಕಾರಕ್ಕೆ ಸಂಸ್ಥೆ ಕೃತಜ್ಞತೆ ವ್ಯಕ್ತಪಡಿಸಿದೆ. ಮೆಟ್ರೋ ಸೇವೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಬಿಎಂಆರ್ಸಿಎಲ್ ವೆಬ್ಸೈಟ್ ಅಥವಾ ಅಧಿಕೃತ ಸಾಮಾಜಿಕ ಜಾಲತಾಣಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.