ರಾಮನಗರಕ್ಕೂ ಮುಟ್ಟಿದ ನೈತಿಕ ಪೊಲೀಸ್ ಗಿರಿ: ಹಿಂದೂ ಯುವಕ, ಮುಸ್ಲಿಂ ಯುವತಿ ಮೇಲೆ ಹಲ್ಲೆ; ಒಬ್ಬ ವಶಕ್ಕೆ
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ರಾಮನಗರ ಗ್ರಾಮಾಂತರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಒಬಬ್ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.;
ಕರಾವಳಿ ಪ್ರದೇಶದಲ್ಲಿ ಹೆಚ್ಚೆಚ್ಚು ವರದಿಗಳಾಗುತ್ತಿದ್ದ ನೈತಿಕ ಪೊಲೀಸ್ಗಿರಿ ಪ್ರಕರಣ ಇದೀಗ ಬೆಂಗಳೂರು ಮಹಾನಗರ ಸಮೀಪದ ರಾಮನಗರಕ್ಕೂ ತಲುಪಿದೆ. ಪಟ್ಟಣದ ಹೊರವಲಯದ ಬೆಂಗಳೂರು-ಮೈಸೂರು ಹಳೆಯ ಹೆದ್ದಾರಿಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಬೆದರಿಕೆ ಹಾಕಿ ಪ್ರಕರಣವೊಂದು ನಡೆದಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ರಾಮನಗರ ಗ್ರಾಮಾಂತರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಒಬಬ್ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಸಮಾರಂಭವೊಂದಕ್ಕೆಂದು ಜೊತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯನ್ನು ಮತ್ತೊಂದು ಬೈಕ್ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು ಅಡ್ಡಗಟ್ಟಿದ್ದಾರೆ. ಬಳಿಕ ಹಿಂದೂ ಯುವಕನ ಜತೆ ಮುಸ್ಲಿಂ ಯುವತಿ ಯಾಕೆ ಬೈಕ್ನಲ್ಲಿ ಹೋಗುತ್ತಿದ್ದಾಳೆ ಎಂದು ಪ್ರಶ್ನಿಸಿ ಬೆದರಿಕೆ ಹಾಕಿದ್ದಾರೆ.
ವಿಡಿಯೋದಲ್ಲಿ ಕಂಡುಬಂದಿರುವಂತೆ, ಮುಸ್ಲಿಂ ಯುವಕರು, ಬೈಕ್ನಲ್ಲಿ ಹೋಗುತ್ತಿದ್ದ ಯುವಕನಿಗೆ "ಇವನ್ಯಾರು?" ಎಂದು ಯುವತಿಯನ್ನು ಕೇಳುತ್ತಾರೆ. ಆಕೆ "ಸ್ನೇಹಿತ" ಎಂದು ಹೇಳಿದಾಗ, ಯುವತಿಯೊಂದಿಗೆ ಏಕೆ ಬೈಕ್ನಲ್ಲಿ ಹೋಗುತ್ತಿದ್ದೀಯಾ ಎಂದು ಆ ಯುವಕನನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಯುವತಿಗೆ ಆಕೆಯ ಪೋಷಕರಿಗೆ ಫೋನ್ ಮಾಡುವಂತೆ ಬೆದರಿಕೆ ಹಾಕಿದ್ದಾರೆ.
ಪೊಲೀಸ್ ಕಾರ್ಯಾಚರಣೆ
ಘಟನೆಯನ್ನು ಮೊಬೈಲ್ನಲ್ಲಿ ವಿಡಿಯೋ ಮಾಡಲಾಗಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಕ್ಷಿಪ್ರವಾಗಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ಗಂಭೀರತೆಯನ್ನು ಅರಿತ ರಾಮನಗರ ಗ್ರಾಮಾಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ವಿಡಿಯೋದ ಆಧಾರದ ಮೇಲೆ, ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.