Mysore MUDA Scam| ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲ

Update: 2024-08-17 04:55 GMT

ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಧಾವರ್ ಚಂದ್ ಗೆಹ್ಲೋಟ್‌ ಅವರು ಅನುಮತಿ ನೀಡಿದ್ದಾರೆ.

ಇದು, ಸಿದ್ದರಾಮಯ್ಯ ಅವರ ರಾಜಕೀಯದಲ್ಲಿ ದೊಡ್ಡ ಸವಾಲು ಮತ್ತು ಸಂಕಷ್ಟವನ್ನು ತಂದೊಡ್ಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, ಮಡಿಕೇರಿಯ ಟಿಜೆ ಅಬ್ರಾಹಂ ಹಾಗೂ ಪ್ರದೀಪ್‌ ಎನ್ನುವವರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ.

ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು.

ದೂರು ನೀಡಿದ್ದ ದಿನವೇ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟೀಸ್ ಜಾರಿ ಮಾಡಿದ್ದರು. ಇದೀಗ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ.

ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಆದೇಶ ಪ್ರತಿ:

 

 

 

 

 

 

 

 

Tags:    

Similar News