Mysore MUDA Scam | ಇಂದು ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ಸಾಧ್ಯತೆ

ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

Update: 2024-09-27 06:14 GMT
ಸಿದ್ದರಾಮಯ್ಯ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್  ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗುವ ಸಾಧ್ಯತೆಯಿದೆ. ಎಫ್​ಐಆರ್​​ನಲ್ಲಿ ಸಿಎಂ ಸಿದ್ದರಾಮಯ್ಯ A1 (ಆರೋಪಿ ನಂಬರ್ 1) ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಎಫ್​ಐಆರ್ ದಾಖಲಿಸಲು ವಿಳಂಬವಾಗುತ್ತಿದೆ ಎಂದು ಆರೋಪಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಎಸ್‌ಪಿ ವಿರುದ್ಧವೇ ದೂರು ನೀಡಿದ್ದಾರೆ.

Tags:    

Similar News