ಇಂಡಿಯಾ ಸರ್ಕಾರ ರಚನೆ ಸಹಾಯಕ್ಕೆ ಯಾರೂ ಸಂಪರ್ಕಿಸಿಲ್ಲ: ಡಿಕೆಶಿ

Update: 2024-06-04 15:59 GMT

ಇಂಡಿಯಾ ಬ್ಲಾಕ್‌ ಕೇಂದ್ರದಲ್ಲಿ ಸರ್ಕಾರ ರಚನೆಗೆ ಕಸರತ್ತು ಆರಂಭಿಸಿರುವ ಹಿನ್ನೆಲೆಯಲ್ಲಿ ಬೆಂಬಲಕ್ಕಾಗಿ ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಜತೆ ಸಂಧಾನ ಪ್ರಕ್ರಿಯೆಗೆ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮುಂದಾಗುತ್ತಾರೆಯೇ?

ಮೂಲಗಳ ಪ್ರಕಾರ ಆ ಸಾಧ್ಯತೆ ಇದೆ. ತೆಲಂಗಾಣ ಚುನಾವಣೆಯಲ್ಲಿ ರೇವಂತ್‌ ರೆಡ್ಡಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬರುವಂತಾಗಲು ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಉಳಿಯಲು ತನ್ನದೇ ರೀತಿಯ ಉಪಾಯಗಳನ್ನು ಹೆಣೆದಿದ್ದ ಡಿ.ಕೆ. ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌ ಪಕ್ಷದಲ್ಲಿ "ಟ್ರಬಲ್‌ ಶೂಟರ್‌ʼ ಎಂಬ ಹೆಸರೂ ಇದೆ.

ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್‌ ಅವರ ಹೆಸರು ಮತ್ತೆ ಮುನ್ನಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಡಿಕೆ ಶಿವಕುಮಾರ್‌ ಅವರು "ಇಲ್ಲʼ ಎಂದುತ್ತರಿಸಿದ್ದಾರೆ. ಕೇಂದ್ರದಲ್ಲಿ ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ನಿಮ್ಮ ಸಹಾಯ ಕೇಳಿದ್ದಾರಾ ಎಂದು ಪ್ರಶ್ನಿಸಿದಾಗ, “ಇಲ್ಲ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ” ಎಂದಿದ್ದಾರೆ.

Tags:    

Similar News