Bangalore Stampede| ಕಾಲ್ತುಳಿತ ಘಟನೆಯ ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ, ಗೃಹಸಚಿವರು ರಾಜೀನಾಮೆ ಕೊಡಲಿ: ಛಲವಾದಿ ನಾರಾಯಣಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾಲ್ತುಳಿತ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.;
ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ
ಆರ್ಸಿಬಿ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ರಾಜಿನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ವಿಜಯೋತ್ಸವ ಆಯೋಜನೆಗೆ ಹೆಚ್ಚುವರಿ ಸಮಯ, ಸಮಗ್ರ ಯೋಜನೆ ಹಾಗೂ ಸೂಕ್ತ ಭದ್ರತಾ ಸಿದ್ಧತೆ ಅಗತ್ಯ ಎಂದು ವಿಧಾನಸೌಧ ಡಿಸಿಪಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಎಚ್ಚರಿಸಿದ್ದರೂ ಅದನ್ನು ತಿರಸ್ಕರಿಸಿ, ಏಕಪಕ್ಷಿಯ ತೀರ್ಮಾನದ ಮೂಲಕ ವಿಜಯೋತ್ಸವ ಆಯೋಜನೆಗೆ ನಿರ್ಧರಿಸಿದವರು ಯಾರು ಎಂದು ಪ್ರಶ್ನಿಸಿದ್ದಾರೆ.
ಎದುರಾಗುವ ಭದ್ರತಾ ಸವಾಲುಗಳ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟವಾಗಿ ತಿಳಿಸಿದ್ದರೂ ಅಭಿಪ್ರಾಯ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಪೊಲೀಸರು ಎಚ್ಚರಿಕೆ ನಿರ್ಲಕ್ಷ್ಯಿಸಿ ಎರಡು ಕಡೆ ಕಾರ್ಯಕ್ರಮವನ್ನು ನಡೆಸಲು ಅನುಮತಿ ನೀಡಿದ್ದರಿಂದಲೇ ಕಾಲ್ತುಳಿತ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಘಟನೆಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಇದು ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದ ದುರಂತ. ಪ್ರಜಾಪ್ರಭುತ್ವದಲ್ಲಿ ಈ ರೀತಿಯ ಅಸಡ್ಡೆ, ಪರೋಕ್ಷವಾಗಿ ಸಾರ್ವಜನಿಕರಿಗೆ ಹಾನಿ ಉಂಟು ಮಾಡುವಂತಹ ನಿರ್ಧಾರಗಳು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.