ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾ ಗೌಡ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿ ನ್ಯಾಯಾಧೀಶ ಜೈಶಂಕರ್ ಆದೇಶ ನೀಡಿದ್ದಾರೆ.

Update: 2024-08-22 13:29 GMT
ಪವಿತ್ರಾ ಗೌಡ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾ ಗೌಡ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು  ಮುಂದೂಡಿ ನ್ಯಾಯಾಧೀಶ ಜೈಶಂಕರ್ ಅವರು ಆದೇಶ ನೀಡಿದ್ದಾರೆ. ಇದು ಎರಡನೇ ಬಾರಿಗೆ ಅವರ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ. ಆಗಸ್ಟ್​ 27ಕ್ಕೆ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಪವಿತ್ರಾ ಗೌಡಗೆ ಜಾಮೀನು ನೀಡದಂತೆ ಎಸ್​ಪಿಪಿ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿಸಿದ ಆರೋಪ ಪವಿತ್ರಾ ಗೌಡ ಅವರ ಮೇಲಿದೆ. ಈ ಕೇಸ್​ನಲ್ಲಿ ನಟ ದರ್ಶನ್​ ಕೂಡ ಪ್ರಮುಖ ಆರೋಪಿ. ಇವರೆಲ್ಲರೂ ಪ್ರಭಾವಿ ವ್ಯಕ್ತಿಗಳಾದ ಕಾರಣ ಒಂದು ವೇಳೆ ಜಾಮೀನು ಸಿಕ್ಕರೆ ಸಾಕ್ಷಿ ನಾಶಕ್ಕೆ ಪ್ರಯತ್ನಿಸುವ ಸಾಧ್ಯತೆ ಇದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಆಕ್ಷೇಪಣೆ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರಂಭದಿಂದ ಇಲ್ಲಿಯವರೆಗೆ  ವಿವಿಧ ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಎಫ್​ಎಸ್​ಎಲ್​ ವರದಿಯಲ್ಲಿ ನಟನ ವಿರುದ್ಧ ಪ್ರಮುಖ ಸಾಕ್ಷಿಗಳು ದೊರೆತಿವೆ. ದರ್ಶನ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಲು ಪೊಲೀಸರು ತಯಾರಾಗಿದ್ದಾರೆ. ದರ್ಶನ್ ಮತ್ತು ಈ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾದ ಎಲ್ಲ ಆರೋಪಿಗಳ ವಿರುದ್ಧ ಅಂದಾಜು 4 ಸಾವಿರ ಪುಟಗಳ ಚಾರ್ಜ್​ಶೀಟ್ ಸಿದ್ಧವಾಗಿದೆ. ಆರೋಪಿಗಳಿಂದ ವಶಪಡಿಸಿಕೊಂಡ ಮೊಬೈಲ್​ನಿಂದ ಆಘಾತಕಾರಿ ಫೋಟೋಗಳು ಕೂಡ ಪೊಲೀಸರಿಗೆ ಸಿಕ್ಕಿವೆ.

Tags:    

Similar News