ಕಾಲಮಿತಿಯಲ್ಲಿ ಪಿಎಂ ಮಿತ್ರ ಪಾರ್ಕ್‌ ಯೋಜನೆ ಪೂರ್ಣ: ಸಚಿವ ಶಿವಾನಂದ ಪಾಟೀಲ್‌

ಈ ಯೋಜನೆಯಲ್ಲಿ ನೂಲಿನಿಂದ ಸಿದ್ದ ಉಡುಪು ಉತ್ಪಾದನೆ ಹಂತದವರೆಗೆ ಉದ್ಯಮಗಳು ಇರಲಿವೆ. ಸುಮಾರು ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಮೂಲ ಸೌಕರ್ಯ ನಿರ್ಮಿಸಲು 390 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.;

Update: 2025-08-19 08:46 GMT

ಜವಳಿ ಸಚಿವ ಶಿವಾನಂದ ಪಾಟೀಲ್‌

ಕಲಬುರಗಿಯಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್‌ ಯೋಜನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ವಿಧಾನಪರಿಷತ್‌ನಲ್ಲಿ ಮಂಗಳವಾರ ಜಗದೇವ್‌ ಗುತ್ತೇದಾರ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಯೋಜನೆಯಲ್ಲಿ ನೂಲಿನಿಂದ ಸಿದ್ಧ ಉತ್ಪಾದನೆ ಹಂತದವರೆಗೆ ಉದ್ಯಮಗಳು ಇರಲಿವೆ. ಸುಮಾರು ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಮೂಲ ಸೌಕರ್ಯ ನಿರ್ಮಿಸಲು 390 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಕಲಬುರಗಿ ತಾಲೂಕಿನ ನದಿ ಸಿನ್ನೂರು, ಕಿರಣಗಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ವಿವಿಧ ಸರ್ವೆ ನಂಬರ್‌ಗಳ ಒಟ್ಟು ಒಂದು ಸಾವಿರ ಎಕರೆ ಭೂಮಿಯನ್ನು ಪಿಎಂ ಮಿತ್ರ ಪಾರ್ಕ್‌ ಕರ್ನಾಟಕ ಲಿಮಿಟೆಡ್‌ಗೆ 99 ವರ್ಷಗಳ ಅವಧಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Tags:    

Similar News