Weather Update| ರಾಜ್ಯದಲ್ಲಿ ಕೊಂಚ ಬಿಡುವು ಕೊಟ್ಟ ಮಳೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.;
ರಾಜ್ಯದಲ್ಲಿ ಮಳೆ ಕೊಂಚ ಬಿಡುವು ನೀಡಿದೆ.
ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ (ಜೂ.19) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಮುದ್ರಕ್ಕೆ ತೆರಳದಿರಲು ಸೂಚನೆ
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜೂ.19 ರ ಬೆಳಗ್ಗೆ 8.30ರ ವರೆಗೆ ಜಿಲ್ಲೆಯ ಸಮುದ್ರ ತೀರದಲ್ಲಿ ಭೀಕರ ಅಲೆಗಳು ಏಳುವ ಸಾಧ್ಯತೆಯಿದ್ದು ಕಡಲಂಚಿನ ಜನರು ಸುರಕ್ಷಿತವಾಗಿರುವಂತೆ ಕಾರಾವರ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಸೂಚಿಸಿದ್ದಾರೆ.
ವಿರಾಜಪೇಟೆಯಲ್ಲಿ ಮಳೆ ಇಳಿಮುಖ
ವಿರಾಜಪೇಟೆ ಭಾಗದಲ್ಲಿ ಮಳೆ ಬುಧವಾರ ಕೊಂಚ ಇಳಿಮುಖವಾಗಿದ್ದು, ಜಲಾವೃತಗೊಂಡಿದ್ದ ಗದ್ದೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಈ ವಿಭಾಗದಲ್ಲಿ ಮಳೆಯ ಪ್ರಮಾಣ ಇಳಿಮುಖಗೊಂಡಿದ್ದರಿಂದ ಇಲ್ಲಿನ ಆರ್ಜಿ, ಬೇಟೋಳಿ, ಕೆದಮುಳ್ಳೂರು, ಹೆಗ್ಗಳ ಗ್ರಾಮಗಳಲ್ಲಿ ಹಾಗೂ ಕದನೂರು ಗ್ರಾಮಗಳಲ್ಲಿ ಗದ್ದೆಗಳು ಜಲಾವೃತ ಗೊಂಡಿದ್ದವು. ಮಳೆ ಇಳಿಮುಖಗೊಂಡಿದ್ದರಿಂದ ಗದ್ದೆಗಳಲ್ಲಿ ನೀರಿನ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ವಿರಾಜಪೇಟೆ ವಿಭಾಗ ವ್ಯಾಪ್ತಿಯ ಐಮಂಗಲ, ಮಗ್ಗುಲ ಬಿಟ್ಟಂಗಾಲ ಪ್ರದೇಶಗಳಲ್ಲೂಭಾರೀ ಮಳೆಯಿಂದ ಗದ್ದೆಗಳು ನೀರಿನಿಂದ ತುಂಬಿ ಇದೀಗ ಇಳಿಮುಖಗೊಂಡಿವೆ.