ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ವಿಚಾರಣೆ ಜೂನ್ 12ಕ್ಕೆ ಮುಂದೂಡಿಕೆ

ಜೂನ್ 4ರಂದು ಕಾಲ್ತುಳಿತ ಘಟನೆ ಸಂಭವಿಸಿದ ನಂತರ, ಜೂನ್ 5 ರ ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮಾಧ್ಯಮ ವರದಿಗಳನ್ನು ಆಧರಿಸಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ದಾಖಲಿಸಿಕೊಂಡಿತ್ತು.;

Update: 2025-06-10 06:02 GMT

ಕರ್ನಾಟಕ ಹೈಕೋರ್ಟ್‌ 

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿರುವ ಪ್ರಕರಣದ ವಿಚಾರಣೆಯನ್ನು ಜೂನ್ 12, 2025ಕ್ಕೆ ಮುಂದೂಡಿದೆ.

ಜೂನ್​ 10ರಂದು ನಡೆದ ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಅವರು ಘಟನೆಗೆ ಸಂಬಂಧಿಸಿದ ವರದಿಯನ್ನು ಜೂನ್ 11ರಂದು ಸಲ್ಲಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಬೇಕಾಗಿರುವ ಹಿನ್ನೆಲೆಯಲ್ಲಿ 12ನೇ ತಾರಿಕಿಗೆ ಮುಂದೂಡಿಕೆ ಮಾಡಲಾಗಿದೆ.

ಕಾಲ್ತುಳಿತದಿಂದ ಉಂಟಾದ ಗೊಂದಲ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ತೀವ್ರ ಕಾಳಜಿ ವಹಿಸಿರುವ ಹೈಕೋರ್ಟ್, ಈ ವಿಷಯದಲ್ಲಿ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಭವಿಷ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಮಹತ್ವವನ್ನೂ ನ್ಯಾಯಾಲಯ ಪರೋಕ್ಷವಾಗಿ ಸೂಚಿಸಿದೆ

ಜೂನ್​ 5ರಂದು ಕೇಸ್​ ದಾಖಲಿಸಿದ್ದ ಕೋರ್ಟ್​

ಜೂನ್ 4ರಂದು ಕಾಲ್ತುಳಿತ ಘಟನೆ ಸಂಭವಿಸಿದ ನಂತರ, ಜೂನ್ 5 ರ ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮಾಧ್ಯಮ ವರದಿಗಳನ್ನು ಆಧರಿಸಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ದಾಖಲಿಸಿಕೊಂಡಿದೆ.

Tags:    

Similar News