ವಿಧಾನಸಭೆ ಅಧಿವೇಶನದಲ್ಲಿ ಮಂಗಳವಾರ ಹತ್ತು ಪ್ರಮುಖ ವಿಧೇಯಕಗಳನ್ನು ಮಂಡಿಸಿ, ಚರ್ಚೆಗೆ ಅವಕಾಶ ನೀಡಲಾಯಿತು. ಕಲಾಪದಲ್ಲಿ ಮೊದಲಿಗೆ ನಡೆಯುವ ಪ್ರಶ್ನೋತ್ತರ ಅವಧಿಯನ್ನು ಕೈಬಿಟ್ಟು, ವಿಧೇಯಕಗಳ ಪರ್ಯಾಲೋಚನೆಗೆ ವಿಶೇಷ ಆದ್ಯತೆ ನೀಡಲಾಯಿತು.ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ವಿಧೇಯಕಗಳನ್ನು ಮಂಡಿಸಿದರು. ಎಚ್.ಕೆ. ಪಾಟೀಲ್ ಅವರು ಮಂಡಿಸಿದ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕದ ಮೇಲೆ ಸದಸ್ಯರು ಸುದೀರ್ಘ ಚರ್ಚೆ ನಡೆಸಿ, ಲೋಪಗಳನ್ನು ಪ್ರಸ್ತಾಪಿಸಿ ಸಚಿವರಿಂದ ಸ್ಪಷ್ಟೀಕರಣ ಪಡೆದರು.ಸಹಕಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ತರಲು ಹಾಗೂ ಸದಸ್ಯರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಹಲವು ಬದಲಾವಣೆಗಳನ್ನು ತಿದ್ದುಪಡಿ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.ಮಂಡನೆಯಾದ ಇತರೆ ವಿಧೇಯಕಗಳುನಗರದ ನಿರ್ವಹಣಾ ವ್ಯವಸ್ಥೆ ಸುಧಾರಿಸಿ, ದೊಡ್ಡ ನಗರಾಡಳಿತಕ್ಕೆ ಹೆಚ್ಚುವರಿ ಅಧಿಕಾರ ಮತ್ತು ಜವಾಬ್ದಾರಿ ನೀಡುವ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ತಿದ್ದುಪಡಿ ವಿಧೇಯಕ ಮಂಡಿಸಲಾಯಿತು. ಈ ವಿಧೇಯಕವು ಆರೋಗ್ಯ, ಸಾರಿಗೆ, ವಿದ್ಯುತ್ ಮುಂತಾದ ಸಾರ್ವಜನಿಕ ಜೀವನಕ್ಕೆ ಅವಿಭಾಜ್ಯವಾದ ಸೇವೆಗಳ ನಿರಂತರ ಕಾರ್ಯನಿರ್ವಹಣೆಯನ್ನು ಖಚಿತಪಡಿಸಲು ಕಾನೂನು ಬದಲಾವಣೆ ಮಾಡಲಾಗಿದೆ.ನಗರ ಪ್ರದೇಶಗಳ ಸ್ಥಳೀಯ ಆಡಳಿತ ಬಲಪಡಿಸಿ, ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕಗೊಳಿಸಲು ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಯಿತು. ಅದೇ ರೀತಿ ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ವಿಧೇಯಕ, ಕರ್ನಾಟಕ ಬಂದರುಗಳ (ಸರಕು ಇಳಿಕೆ ಮತ್ತು ಹಡಗು ಶುಲ್ಕ) ತಿದ್ದುಪಡಿ ವಿಧೇಯಕ, ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ, ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ, ವಿನಿಯಮ ಹಾಗೂ ನಿಯಂತ್ರಣ) ತಿದ್ದುಪಡಿ ವಿಧೇಯಕ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಯಿತು.
ವಿಧಾನಸಭೆ ಅಧಿವೇಶನದಲ್ಲಿ ಮಂಗಳವಾರ ಹತ್ತು ಪ್ರಮುಖ ವಿಧೇಯಕಗಳನ್ನು ಮಂಡಿಸಿ, ಚರ್ಚೆಗೆ ಅವಕಾಶ ನೀಡಲಾಯಿತು. ಕಲಾಪದಲ್ಲಿ ಮೊದಲಿಗೆ ನಡೆಯುವ ಪ್ರಶ್ನೋತ್ತರ ಅವಧಿಯನ್ನು ಕೈಬಿಟ್ಟು, ವಿಧೇಯಕಗಳ ಪರ್ಯಾಲೋಚನೆಗೆ ವಿಶೇಷ ಆದ್ಯತೆ ನೀಡಲಾಯಿತು.ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ವಿಧೇಯಕಗಳನ್ನು ಮಂಡಿಸಿದರು. ಎಚ್.ಕೆ. ಪಾಟೀಲ್ ಅವರು ಮಂಡಿಸಿದ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕದ ಮೇಲೆ ಸದಸ್ಯರು ಸುದೀರ್ಘ ಚರ್ಚೆ ನಡೆಸಿ, ಲೋಪಗಳನ್ನು ಪ್ರಸ್ತಾಪಿಸಿ ಸಚಿವರಿಂದ ಸ್ಪಷ್ಟೀಕರಣ ಪಡೆದರು.ಸಹಕಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ತರಲು ಹಾಗೂ ಸದಸ್ಯರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಹಲವು ಬದಲಾವಣೆಗಳನ್ನು ತಿದ್ದುಪಡಿ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.ಮಂಡನೆಯಾದ ಇತರೆ ವಿಧೇಯಕಗಳುನಗರದ ನಿರ್ವಹಣಾ ವ್ಯವಸ್ಥೆ ಸುಧಾರಿಸಿ, ದೊಡ್ಡ ನಗರಾಡಳಿತಕ್ಕೆ ಹೆಚ್ಚುವರಿ ಅಧಿಕಾರ ಮತ್ತು ಜವಾಬ್ದಾರಿ ನೀಡುವ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ತಿದ್ದುಪಡಿ ವಿಧೇಯಕ ಮಂಡಿಸಲಾಯಿತು. ಈ ವಿಧೇಯಕವು ಆರೋಗ್ಯ, ಸಾರಿಗೆ, ವಿದ್ಯುತ್ ಮುಂತಾದ ಸಾರ್ವಜನಿಕ ಜೀವನಕ್ಕೆ ಅವಿಭಾಜ್ಯವಾದ ಸೇವೆಗಳ ನಿರಂತರ ಕಾರ್ಯನಿರ್ವಹಣೆಯನ್ನು ಖಚಿತಪಡಿಸಲು ಕಾನೂನು ಬದಲಾವಣೆ ಮಾಡಲಾಗಿದೆ.ನಗರ ಪ್ರದೇಶಗಳ ಸ್ಥಳೀಯ ಆಡಳಿತ ಬಲಪಡಿಸಿ, ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕಗೊಳಿಸಲು ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಯಿತು. ಅದೇ ರೀತಿ ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ವಿಧೇಯಕ, ಕರ್ನಾಟಕ ಬಂದರುಗಳ (ಸರಕು ಇಳಿಕೆ ಮತ್ತು ಹಡಗು ಶುಲ್ಕ) ತಿದ್ದುಪಡಿ ವಿಧೇಯಕ, ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ, ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ, ವಿನಿಯಮ ಹಾಗೂ ನಿಯಂತ್ರಣ) ತಿದ್ದುಪಡಿ ವಿಧೇಯಕ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಯಿತು.