ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು: ಸಿದ್ದರಾಮಯ್ಯ ಗಂಭೀರ ಆರೋಪ

Update: 2024-09-18 11:00 GMT

ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು. ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. *ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.

ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. . ಇಂಥಹ  ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಈಗ, ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ‌ ಬೆದರಿಕೆ ಹಾಕಿದೆ ಎಂದು ಸಿದ್ದರಾಮಯ್ಯ  ಹೇಳಿದ್ದಾರೆ.

ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ‌ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ. ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ‌ ಆಗ್ರಹಿಸಿದರು

ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ ಎಂದು ಟೀಕಿಸದ ಅವರು, ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿರುವುದನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ.

ಐದು ವರ್ಷ ಪೂರೈಸಲ್ಲ 

ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.

Tags:    

Similar News