ಸಮಾಜ ಕಲ್ಯಾಣ ಇಲಾಖೆಯ ಗುಮಾಸ್ತೆಗೆ ಚಾಕು ಇರಿದು ಕೊಲೆ

ಸಮಾಜ ಕಲ್ಯಾಣ ಇಲಾಖೆ ಇಂಡಿ ತಾಲೂಕಿನ ಕಚೇರಿಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದ ರೇಣುಕಾ ಕನ್ನೊಳ್ಳಿ, ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಯೊಬ್ಬ ಏಕಾಏಕಿ ದಾಳಿ ಮಾಡಿದ್ದಾನೆ.;

Update: 2025-06-11 08:40 GMT

ಸಾಂದರ್ಭಿಕ ಚಿತ್ರ

ಸಮಾಜ ಕಲ್ಯಾಣ ಇಲಾಖೆಯಲ್ಲಿ  ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಡೆದಿದೆ. ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಮೃತ ಮಹಿಳೆ.

ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಇಂಡಿ ಕಚೇರಿಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದ ರೇಣುಕಾ ಕನ್ನೊಳ್ಳಿ, ಬುಧವಾರ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಯೊಬ್ಬ ಏಕಾಏಕಿ ದಾಳಿ ಮಾಡಿದ್ದಾನೆ. ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ರೇಣುಕಾ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. 

ಮೃತ ರೇಣುಕಾ ಅನೈತಿಕ ಸಂಬಂಧ ಹೊಂದಿದ್ದ ಹಿನ್ನಲೆ, ಸಂಜು ಬನಸೋಡೆ ಎಂಬಾತ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಸಂಜು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಇಂಡಿ ಶಹರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Similar News