ಅಧ್ಯಯನಕ್ಕಾಗಿ ಮಲೇಶಿಯಾಕ್ಕೆ ತೆರಳಿರುವ ಸ್ಪೀಕರ್ ಯು.ಟಿ.ಖಾದರ್
ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಸಂಸದೀಯ ವ್ಯವಹಾರಗಳು ಹಾಗೂ ಪ್ರಜಾಪ್ರಭುತ್ವ ತತ್ವಗಳ ಬಗ್ಗೆ ಪರಸ್ಪರ ವಿಚಾರ ವಿನಿಮಯ ಮಾಡಿದರು. ಅಲ್ಲದೆ ಭವಿಷ್ಯದಲ್ಲಿ ಕರ್ನಾಟಕ ಹಾಗೂ ಮಲೇಶಿಯಾದ ರಾಜಕೀಯ, ಸಂಸದೀಯ ವ್ಯವಹಾರಗಳು ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಕಾಯ್ದುಕೊಳ್ಳುವ ಬಗ್ಗೆ ಸಹ ಚರ್ಚಿಸಿದರು.;
ಯುಟಿ ಖಾದರ್
ವಿಧಾನ ಸ್ಪೀಕರ್ ಹಾಗೂ ಕಾಮನ್ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಮಲೇಶಿಯಾದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ.
ಮಂಗಳವಾರ ಕೌಲಾಲಾಂಪುರದಲ್ಲಿರುವ ಸಂಸತ್ ಭವನದಲ್ಲಿ ಮಲೇಶಿಯಾದ ಜನಪ್ರತಿನಿಧಿಗಳ ಸಭೆಯ (ದಿವಾನ್ ರಖ್ಯತ್) ಸಭಾಧ್ಯಕ್ಷರು ಮತ್ತು ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಮಲೇಶಿಯಾದ ಜಂಟಿ ಅಧ್ಯಕ್ಷರಾದ ಡಾ.ಜೋಹರಿ ಬಿನ್ ಅಬ್ದುಲ್ ಅವರನ್ನು ಭೇಟಿ ಮಾಡಿದರು.
ಈ ಭೇಟಿಯ ಸಂದರ್ಭದಲ್ಲಿ, ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಮಲೇಶಿಯಾದ ತಮ್ಮ ಸಹವರ್ತಿಯೊಂದಿಗೆ ಸಂಸದೀಯ ವ್ಯವಹಾರಗಳು ಮತ್ತು ಪ್ರಜಾಪ್ರಭುತ್ವ ತತ್ವಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ಅಲ್ಲದೆ, ಭವಿಷ್ಯದಲ್ಲಿ ಕರ್ನಾಟಕ ಮತ್ತು ಮಲೇಶಿಯಾ ನಡುವೆ ರಾಜಕೀಯ, ಸಂಸದೀಯ ವ್ಯವಹಾರಗಳು ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಇನ್ನಷ್ಟು ಬಲಪಡಿಸುವ ಬಗ್ಗೆಯೂ ಚರ್ಚೆ ನಡೆಸಿದರು.
ಸಂಬಂಧಪಟ್ಟ ಇತರೆ ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿದ್ದರು. ಈ ಅಧ್ಯಯನ ಪ್ರವಾಸವು ಎರಡೂ ಕಡೆಯವರ ಸಂಸದೀಯ ವ್ಯವಸ್ಥೆಗಳು ಮತ್ತು ಆಡಳಿತ ಪ್ರಕ್ರಿಯೆಗಳ ಬಗ್ಗೆ ಪರಸ್ಪರ ತಿಳುವಳಿಕೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಸ