ಒಂದೇ ಕುಟುಂಬದ ನಾಲ್ವರ ಅನುಮಾನಾಸ್ಪದ ಸಾವು

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಹೊಸಲಿಂಗಾಪುರದಲ್ಲಿ ನಡೆದಿದೆ.

Update: 2024-05-28 07:49 GMT
ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು
Click the Play button to listen to article

ಕೊಪ್ಪಳ: ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಹೊಸಲಿಂಗಾಪುರದಲ್ಲಿ ನಡೆದಿದೆ. ರಾಜೇಶ್ವರಿ (50), ವಸಂತಾ (28), ಸಾಯಿಧರ್ಮತೇಜ್ (5) ಮೃತ ದುರ್ದೈವಿಗಳು.ಕೊಲೆ ಶಂಕೆ ವ್ಯಕ್ತವಾಗಿದೆ.

ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ವ್ಯಕ್ತಿ ಜೊತೆ ವಸಂತಾರ ಮದುವೆ ಆಗಿತ್ತು. ಆದರೆ ವಸಂತಾ ಕಳೆದ ಎರಡು ವರ್ಷದ ಹಿಂದೆ ಪತಿಯಿಂದ ದೂರವಾಗಿ, ಬಳಿಕ ಹೊಸ‌‌ಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ತಾಯಿ ಮತ್ತು ಮಗನ ಜೊತೆ ಇದ್ದರು.

ವಸಂತಾ ಹೊಸ‌‌ಲಿಂಗಾಪುರ ಬಳಿ ಇರುವ ಬೊಂಬೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅನ್ಯ ಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದರು. ನಂತರ ಆರು ತಿಂಗಳ ಹಿಂದೆ ಕುಟುಂಬಸ್ಥರಿಂದ ಸ್ವಲ್ಪ ಅಂತರ ಕಾಯ್ದುಕೊಂಡಿದ್ದರು.

ಸೋಮವಾರ (ಮೇ 27) ರಾತ್ರಿ ರಾಜೇಶ್ವರಿ ಅವರಿಗೆ ಇನ್ನೊಬ್ಬ ಮಗಳು ಕರೆ ಮಾಡಿದ್ದರು. ಆದರೆ ರಾಜೇಶ್ವರಿ ಕರೆ ಸ್ವೀಕರಿಸಲಿಲ್ಲ. ಹೀಗಾಗಿ ಇಂದು (ಮೇ 28) ಮುಂಜಾನೆ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾಜೇಶ್ವರಿ ಮತ್ತು ಸಾಯಿಧರ್ಮತೇಜ್ ಶವ ಬೆಡ್​ರೂಮ್​ನಲ್ಲಿ ಮತ್ತು ವಸಂತಾ ಶವ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮುನಿರಾಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ.

Tags:    

Similar News