HonnyTrap| ವಿದ್ಯಾರ್ಥಿಯ ಅಪ್ಪನಿಗೆ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದ ಪ್ರೀಸ್ಕೂಲ್ ಶಿಕ್ಷಕಿ ಬಂಧನ
ಮೊದಲಿಗೆ ಮಗುವಿನ ಅಪ್ಪನನ್ನು ಪರಿಚಯ ಮಾಡಿಕೊಂಡಿದ್ದ ಟೀಚರ್, ನಿಧಾನವಾಗಿ ಸಲುಗೆ ಬೆಳೆಸಿಕೊಂಡು ಹಣ ವಸೂಲಿ ಮಾಡಲು ಆರಂಭಿಸಿದ್ದಳು. ಬೇಸತ್ತ ಅವರು ದೂರು ನೀಡಿದ ಬಳಿಕ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.;
ಸಾಂದ್ರರ್ಭಿಕ ಚಿತ್ರ
ಪ್ರಿಸ್ಕೂಲ್ ನಡೆಸುತ್ತಿದ್ದ ಟೀಚರ್ ಒಬ್ಬಳು, ಮಗುವಿನ ಪೋಷಕರೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ ಆರೋಪದಲ್ಲಿ ಪೊಲೀಸ್ ಬಲೆಗೆ ಬಿದ್ದಿದ್ದಾಳೆ. ಮಗುವಿನ ಅಪ್ಪನಿಗೆ ಕಿಸ್ ಕೊಟ್ಟು ಅದರ ವಿಡಿಯೋ ತೋರಿಸಿ ಬೆದರಿಸಿ 50,000 ರೂಪಾಯಿ ವಸೂಲಿ ಮಾಡಿಲ್ಲದೆ, ಬಳಿಕ ತನ್ನ ಗ್ಯಾಂಗ್ ಜತೆ ಸೇರಿಕೊಂಡು ಲಕ್ಷಾಂತರ ರೂಪಾಯಿ ಕಿತ್ತುಕೊಂಡಿದ್ದಳು. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಘಟನೆ ನಡೆದಿದ್ದು, ಸಿಸಿಬಿ ಪೊಲೀಸರು ಟೀಚರ್ ಸೇರಿ ಗ್ಯಾಂಗ್ನ ಎಲ್ಲರನ್ನೂ ಬಂಧಿಸಿದ್ದಾರೆ.
ಶ್ರೀದೇವಿ ರುಡಿಗಿ ಬಂಧಿತ ಮಹಿಳೆ. ಈಕೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದಳು. ಪ್ರಿ ಸ್ಕೂಲ್ಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಮಗುವಿನ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂಪಾಯಿ ಸುಲಿಗೆ ಮಾಡಿದ್ದಳು. ಬೆದರಿಕೆ ಮುಂದುವರಿಸಿ ಮತ್ತೊಂದು ಲಕ್ಷ ರೂಪಾಯಿ ವಸೂಲಿ ಮಾಡಲು ಮುಂದಾದಾಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ.
ಆರೋಪಿ ಶ್ರೀದೇವಿ ರುಡಿಗಿಗೆ 2023 ಲ್ಲಿ ರಾಕೇಶ್ ಎಂಬ ಪೋಷಕರೊಬ್ಬರ ಪರಿಚಯವಾಗಿತ್ತು. ರಾಕೇಶ್ನಿಂದ ಶಾಲೆ ನಿರ್ವಹಣೆ, ತಂದೆಯ ಚಿಕಿತ್ಸೆಗೆಂದು ಶ್ರೀದೇವಿ 4 ಲಕ್ಷ ರೂ. ಸಾಲ ಪಡೆದಿದ್ದಳು. 2024ರ ಮಾರ್ಚ್ನಲ್ಲಿ ವಾಪಸ್ ಕೊಡುವುದಾಗಿ ನಂಬಿಸಿದ್ದಳು. ಆದರೆ, ಹಣ ವಾಪಸ್ ಕೇಳಿದಾಗ ಕೊಟ್ಟಿರಲಿಲ್ಲ. ಬಳಿಕ ನೀವು ಶಾಲೆಯ ಪಾರ್ಟನರ್ ಆಗಿ ಎಂದು ಆಫರ್ ಕೊಟ್ಟಿದ್ದಳು. ಬಳಿಕ ಇಬ್ಬರ ನಡುವೆ ಸಲುಗೆ ಬೆಳದು ಇಬ್ಬರೂ ಹಲವೆಡೆ ಜತೆಯಾಗಿ ಸುತ್ತಾಟ ನಡೆಸಿದ್ದರು. ಶ್ರೀದೇವಿ ಜೊತೆ ಮಾತನಾಡಲೆಂದೇ ರಾಕೇಶ್ ಹೊಸ ಸಿಮ್ ಹಾಗೂ ಪೋನ್ ಖರೀದಿಸಿದ್ದರು. ಆದರೆ, ಜನವರಿ ಮೊದಲ ವಾರದಲ್ಲಿ ರಾಕೇಶ್ ಹಣ ವಾಪಸ್ ಕೇಳಿದ್ದರು. ಹಣ ವಾಪಸ್ ಕೇಳಿದ್ದ ರಾಕೇಶ್ಗೆ, ‘ನಿನ್ನ ಜೊತೆ ರಿಲೇಶನ್ ಶಿಪ್ನಲ್ಲಿ ಇರುತ್ತೇನೆ’ ಎಂದು ಹೇಳಿದ್ದ ಶ್ರೀದೇವಿ 15 ಲಕ್ಷ ರೂ. ಹಣ ಕೇಳಿದ್ದಳು. ಇದಕ್ಕೆ ರಾಕೇಶ್ ಒಪ್ಪಿರಲಿಲ್ಲ.
ನಂತರ ಶ್ರೀದೇವಿ ಪೋಷಕ ರಾಕೇಶ್ ಮನೆಗೆ ತೆರಳಿ ಆತನಿಗೆ ಮುತ್ತುಕೊಟ್ಟಿದ್ದಳು. ಬಳಿಕ ಬ್ಲ್ಯಾಕ್ಮೇಲ್ ಮಾಡಿ 50 ಸಾವಿರ ರೂ. ಪಡೆದಿದ್ದಳು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆ ಬಳಿಕ, ಪದೇ ಪದೇ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಆಕೆ ಜತೆ ಸಂಪರ್ಕಕ್ಕೆ ಇಟ್ಟುಕೊಂಡಿದ್ದ ಸಿಮ್ ಕಾರ್ಡ್ ಅನ್ನು ರಾಕೇಶ್ ಬಿಸಾಡಿದ್ದರು.
ಮಾರ್ಚ್ 12ರಂದು ರಾಕೇಶ್ ಪತ್ನಿಗೆ ಕರೆ ಮಾಡಿದ್ದ ಶ್ರೀದೇವಿ, ಮಕ್ಕಳ ಟಿಸಿ ಕಳುಹಿಸಿಕೊಡುತ್ತೇನೆ, ನಿಮ್ಮ ಪತಿಯನ್ನು ಕಳುಹಿಸಿ ಎಂದಿದ್ದಳು. ಅದರಂತೆ ಶ್ರೀದೇವಿಯ ಪ್ರೀ ಸ್ಕೂಲ್ಗೆ ರಾಕೇಶ್ ತೆರಳಿದ್ದರು. ಆಗ ಅಲ್ಲಿ ಶ್ರೀದೇವಿ ಜೊತೆ ಹಾಜರಿದ್ದ ಇತರೆ ಆರೋಪಿಗಳಾದ ಸಾಗರ್ ಹಾಗೂ ಗಣೇಶ್ ಬೆದರಿಕೆ ಹಾಕಿದ್ದರು.
‘‘ಸಾಗರ್ ಜೊತೆ ಶ್ರೀದೇವಿಗೆ ನಿಶ್ಚಿತಾರ್ಥ ಆಗಿದೆ. ಆದರೆ ನೀನು ಆಕೆ ಜೊತೆ ಮಜಾ ಮಾಡುತ್ತಿದ್ದಿ’’ ಎಂದು ಆರೋಪಿ ಗಣೇಶ್ ಬೆದರಿಕೆ ಹಾಕಿದ್ದ. ಬಳಿಕ ಕಾರಿನಲ್ಲಿ ಕೂರಿಸಿಕೊಂಡು, ‘‘ಯಾರಿಗೂ ವಿಚಾರ ಹೇಳಬಾರದು ಎಂದರೆ 1 ಕೋಟಿ ರೂ. ಕೊಡು’’ ಎಂದು ಬ್ಲ್ಯಾಕ್ಮೇಲ್ ಮಾಡಿದ್ದ. ಕೊನೆಯದಾಗಿ ಆರೋಪಿಗಳು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. 1.90 ಲಕ್ಷ ರೂ. ಹಣ ಪಡೆದು ಬಿಟ್ಟು ಕಳುಹಿಸಿದ್ದರು. ಆದರೆ, ಉಳಿದ ಹಣ ನೀಡುವಂತೆ ಪ್ರಾಣ ಬೆದರಿಕೆ ಹಾಕಿದ್ದರು ಎಂದು ರಾಕೇಶ್ ಆರೋಪಿಸಿದ್ದಾರೆ.
ಬಳಿಕ ರಾಕೇಶ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಶ್ರೀದೇವಿ, ಅರುಣ್ ಮತ್ತು ಸಾಗರ್ರನ್ನು ಬಂಧಿಸಲಾಗಿದೆ. ಸದ್ಯ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ
ಹೀಗಾಗಿ ರಾಕೇಶ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಶ್ರೀದೇವಿ, ಅರುಣ್ ಮತ್ತು ಸಾಗರ್ರನ್ನು ಬಂಧಿಸಲಾಗಿದೆ. ಸದ್ಯ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಮೂವರು ಆರೋಪಿಗಳು ಕೂಡ ವಿಜಯಪುರ ಮೂಲದವರಾಗಿದ್ದಾರೆ.