MM Hills Tiger Death |ನಾಲ್ಕಲ್ಲ, ಐದು ಹುಲಿಗಳ ಸಾವು; ವಿಷ ಪ್ರಾಶನವೇ ಕಾರಣ!
ಈ ಮೊದಲು ತಾಯಿ ಹುಲಿ ಜತೆಗೆ ಅದರ ಮೂರು ಮರಿಗಳು ಸಾವಿಗೀಡಾಗಿದ್ದ ಬಗ್ಗೆ ಇಲಾಖೆ ಮಾಹಿತಿ ನೀಡಿತ್ತು. ಈಗ ಪ್ರಾಥಮಿಕ ತನಿಖೆಯಲ್ಲಿ ಒಟ್ಟು ಐದಯ ಹುಲಿಗಳು ಸಾವಿಗೀಡಾಗಿರುವುದು ಖಚಿತವಾಗಿದೆ.;
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದದ ಗಾಜನೂರು ವಿಭಾಗದ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಹುಲಿ ಮರಿಗಳು ಅಸಹಜವಾಗಿ ಸಾವಿಗೀಡಾಗಿರುವವುದಕ್ಕೆ ವಿಷ ಪ್ರಾಶನವೇ ಕಾರಣ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.
ಈ ಮೊದಲು ತಾಯಿ ಹುಲಿ ಜತೆಗೆ ಅದರ ಮೂರು ಮರಿಗಳು ಸಾವಿಗೀಡಾಗಿದ್ದ ಬಗ್ಗೆ ಇಲಾಖೆ ಮಾಹಿತಿ ನೀಡಿತ್ತು. ಈಗ ಪ್ರಾಥಮಿಕ ತನಿಖೆಯಲ್ಲಿ ಒಟ್ಟು ಐದಯ ಹುಲಿಗಳು ಸಾವಿಗೀಡಾಗಿರುವುದು ಖಚಿತವಾಗಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಇದನ್ನು ಖಚಿತಪಡಿಸಿದ್ದಾರೆ. "ಈ ಸಂಬಂಧ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರಿಗೆ ಪ್ರಾಥಮಿಕ ಮಾಹಿತಿ ದೊರೆತಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ," ಎಂದು ಇಲಾಖೆ ಹೇಳಿದೆ.
ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಲಿಖಿತ ಸೂಚನೆ ನೀಡಿದ್ದರು. ಎಂ.ಎಂ. ಹಿಲ್ಸ್ ಅರಣ್ಯದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಸಚಿವರು ಹೇಳಿಕೆ ನೀಡಿದ್ದರು.
ನಾಲ್ಕು ಹುಲಿಗಳ ಸಾವಿಗೆ ವಿಷ ಪ್ರಾಷನ ಆಗುವಂತೆ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆಯ ವಿಚಕ್ಷಣಾ ದಳಕ್ಕೆ ಆದೇಶಿಸಲಾಗಿದೆ.
ಪ್ರಾಥಮಿಕ ವರದಿ
ಮಹದೇಶ್ವರ ಬಯಲು ಪ್ರದೇಶದಲ್ಲಿ ವಯಸ್ಕ ಹುಲಿ ಮತ್ತು ಅದರ ನಾಲ್ಕು ಮರಿಗಳ ದಾರುಣ ಸಾವಿನ ಬಗ್ಗೆ ಅರಣ್ಯ ಇಲಾಖೆ ಪ್ರಾಥಮಿಕ ವರದಿ ತಯಾರಿಸಿದೆ.
ಜೂನ್ 26 ರಂದು ಇಲಾಖೆಯ ವಿಚಕ್ಷಣಾ ತಂಡದ ಸಿಬ್ಬಂದಿ ದಿನನಿತ್ಯದ ಬೆಳಗಿನ ಗಸ್ತು ತಿರುಗುವಿಕೆಯ ಸಮಯದಲ್ಲಿ ಈ ದುರಂತ ಪತ್ತೆಯಾಗಿದೆ. ಈಗ ಘಟನಾ ಸ್ಥಳದಲ್ಲಿ ಸಾಕ್ಷ್ಯ ಸಂರಕ್ಷಣೆಗೆ ಭದ್ರತೆ ನೀಡಲಾಗಿದ್ದು, ಪ್ರದೇಶವನ್ನು ತಕ್ಷಣವೇ ʼಸಂರಕ್ಷಿತ ವಲಯʼವೆಂದು ಘೋಷಿಸಲಾಗಿದೆ. ಎಲ್ಲಾ ಪುರಾವೆಗಳನ್ನು ಸಂರಕ್ಷಿಸಲು ಮತ್ತು ಸಂಗ್ರಹಿಸಲು 500 ಮೀಟರ್ ಸುತ್ತಲೂ ಸೂಕ್ಷ್ಮ ಮಾಹಿತಿಗಳ ಪತ್ತೆಗೂ ಪ್ರಯತ್ನ ನಡೆದಿದೆ.
ಐದೂ ಹುಲಿಗಳ ಮರಣೋತ್ತರ ಪರೀಕ್ಷೆಗಾಗಿ ಅವುಗಳ ದೇಹಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಐದು ಸದಸ್ಯರ ತಜ್ಞರ ತಂಡವು NTCA ಮಾರ್ಗಸೂಚಿಗಳನ್ನು ಅನುಸರಿಸಿ ಸಮಗ್ರ ಶವಪರೀಕ್ಷೆಯನ್ನು ಕೈಗೊಂಡಿದೆ ಎಂದು ಇಲಾಖೆ ತಿಳಿಸಿದೆ. ಅರಣ್ಯ ಇಲಾಖೆಯ ಮುಖ್ಯ ಸಂರಕ್ಷಣಾಧಿಕಾರಿ ಆದೇಶದ ಮೇರೆಗೆ ಉನ್ನತ ಮಟ್ಟದ ವಿಚಾರಣಾ ಸಮಿತಿ ರಚಿಸಲಾಗಿದೆ.
ದುರಂತ
ದೇಶದಲ್ಲಿ ಅಳಿವಿನಂಚಿನಲ್ಲಿದ್ದ ಹುಲಿಗಳ ಸಂರಕ್ಷಣೆಗಾಗಿ ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ಪರಿಣಾಮ ರಾಜ್ಯದಲ್ಲಿ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಿದ್ದು, ಪ್ರಸ್ತುತ 563 ಹುಲಿಗಳೊಂದಿಗೆ ಕರ್ನಾಟಕವು ದೇಶದಲ್ಲೇ ಅತ್ಯಂತ ಹೆಚ್ಚು ಹುಲಿಗಳನ್ನು ಒಳಗೊಂಡಿರುವ 2ನೇ ರಾಜ್ಯವಾಗಿದೆ. ಆದರೆ, ಈಗ ಈ ದುರಂತ ವನ್ಯಜೀವಿ ಪ್ರೇಮಿಗಳಿಗೆ ಆಘಾತ ಉಂಟು ಮಾಡಿದೆ.