ಬಸವಸಾಗರ ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಯುವಕರು ದುರಂತ ಸಾವು

ನೀರುಪಾಲಾದ ಯುವಕರ ಪತ್ತೆಗಾಗಿ ಕಾಲುವೆಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.;

Update: 2025-05-19 04:54 GMT

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದ ಬಳಿಯ ಬಸವಸಾಗರ ಜಲಾಶಯದ ಜೆಬಿಸಿ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ಭಾನುವಾರ (ಮೇ 18) ನೀರುಪಾಲಾಗಿದ್ದಾರೆ. ಮೃತರನ್ನು ವಿಜಯಪುರ ಮೂಲದ ಜಟ್ಟೆಪ್ಪ (19) ಮತ್ತು ಕರಿಯಪ್ಪ (19) ಎಂದು ಗುರುತಿಸಲಾಗಿದೆ.

ಒಟ್ಟು ಆರು ಮಂದಿ ಕುರಿಗಾಹಿಗಳು ಕುರಿ ಮೇಯಿಸಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಆರೂ ಮಂದಿ ಕಾಲುವೆಯಲ್ಲಿ ಈಜಲು ಇಳಿದಾಗ, ಇಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ. ಉಳಿದ ನಾಲ್ವರು ಸುರಕ್ಷಿತವಾಗಿ ದಡ ಸೇರಿದ್ದಾರೆ.

ನೀರುಪಾಲಾದ ಯುವಕರ ಪತ್ತೆಗಾಗಿ ಕಾಲುವೆಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Similar News