VRL ಬಸ್‌ ಅಪಘಾತ: ಇಬ್ಬರ ಸಾವು, ಏಳು ಪ್ರಯಾಣಿಕರ ಸ್ಥಿತಿ ಗಂಭೀರ!

Update: 2024-06-03 06:44 GMT

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಉರುಳಿ ಬಿದ್ದು  ಇಬ್ಬರು ಪ್ರಯಾಣಿಕರು ಮೃತಪಟ್ಟಿರುವ ಘಟನೆ  ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ  ಭಾನುವಾರ ರಾತ್ರಿ ( 10.30 ರ ಸುಮಾರಿಗೆ) ನಡೆದಿದೆ . ಈ ಘಟನೆಯಲ್ಲಿ , 7 ಜನ ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು ಪರಿಸ್ಥಿತಿ ಚಿಂತಾಜನಕವಾಗಿದೆ.

ಕಲಬುರಗಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಬಸ್‌ನಲ್ಲಿ 37 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಘಟನೆಯ ಪರಿಣಾಮ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತರನ್ನು ಕಲಬುರಗಿ ನಿವಾಸಿಗಳು ಎಂದು ತಿಳಿದುಬಂದಿದೆ.

ಸುದ್ಧಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಸುರಪುರ ಪೊಲೀಸರು ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ಬಸ್‌ನಿಂದ ಹೊರತೆಗೆದು ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕೆಲ ಗಾಯಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸುರಪುರ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Similar News