Operation Sindoor | ಪಾಕಿಸ್ತಾನದಿಂದ ಎರಡನೇ ದಿನವೂ ಮುಂದುವರಿದ ದಾಳಿ, 26 ಕಡೆ ಗಡಿ ದಾಟಿ ಬಂದ ಡ್ರೋನ್ಗಳು
ಪಾಕ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದ ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ
ಗಡಿಯಲ್ಲಿ ಪಾಕ್ ಸೇನೆ ನಡೆಸುತ್ತಿರುವ ಗುಂಡಿನ ದಾಳಿಗೆ ಭಾರತೀಯ ಸೇನೆ ತಿರುಗೇಟು ನೀಡುತ್ತಿದೆ.
ಭಾರತೀಯ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನಿ ಪಡೆಗಳು ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿದ್ದನ್ನು ಭಾರತೀಯ ಸೇನೆ ವಿಫಲಗೊಳಿಸಿದ ಕೆಲವೇ ಗಂಟೆಗಳ ಬಳಿಕ ಪ್ರತಿದಾಳಿ ನಡೆಸಿದೆ. ಆದರೆ, ಪಾಕಿಸ್ತಾನದ ಯಾವ ಸೇನಾ ನೆಲೆ ನಾಶವಾಗಿದೆ ಎಂಬುವುದು ಖಚಿತವಾಗಿಲ್ಲ. ಕದನ ವಿರಾಮ ಉಲ್ಲಂಘನೆಗಳಿಗೆ ಪರಿಣಾಮಕಾರಿ ಪ್ರತ್ಯುತ್ತರ ನೀಡಲಾಗುತ್ತಿದೆ ಎಂಬುದರ ಸಂಕೇತವಾಗಿ ಈ ವಿಡಿಯೋ ಬಿಡುಗಡೆ ಮಾಡಿದೆ.
ಹಣಕಾಸು ನೆರವಿಗೆ ಮೊರೆಯಿಟ್ಟ ಪಾಕಿಸ್ತಾನ ಸರ್ಕಾರ
ಭಾರತ ದಾಳಿಯಿಂದ ಕಂಗಾಲಾಗಿರುವ ಪಾಕಿಸ್ತಾನ ಮತ್ತಷ್ಟು ಆರ್ಥಿಕ ಮುಗ್ಗಟ್ಟು ಅನುಭವಿಸಿದೆ. ಆರ್ಥಿಕ ನಷ್ಟದ ಕೂಪದಿಂದ ಪಾರಾಗಲು ಅಂತರರಾಷ್ಟ್ರೀಯ ಪಾಲುದಾರ ರಾಷ್ಟ್ರಗಳ ಬಳಿ ಆರ್ಥಿಕ ನೆರವಿಗೆ ಪಾಕಿಸ್ತಾನ ಸರ್ಕಾರ ಮೊರೆ ಇಟ್ಟಿದೆ.
ಹೆಚ್ಚುತ್ತಿರುವ ಯುದ್ಧ ಮತ್ತು ದಿಢೀರ್ ಕುಸಿದ ಷೇರು ಮಾರುಕಟ್ಟೆಯಿಂದ ಪಾರಾಗಲು ಸಹಾಯ ಮಾಡುವಂತೆ ಪಾಲುದಾರ ರಾಷ್ಟ್ರಗಳಿಗೆ ಮನವಿ ಮಾಡಿದೆ. ಈ ಮಧ್ಯೆ, ಪಾಕಿಸ್ತಾನದಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಲು ನಿರ್ಬಂಧ ಹೇರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪರಿಸ್ಥಿತಿಯನ್ನು ನಿಭಾಯಿಸಲು ಪಂಜಾಬ್ ಸರ್ಕಾರ ಸಿದ್ಧತೆ: ಸಿಎಂಒ
ಪರಿಸ್ಥಿತಿಯನ್ನು ನಿಭಾಯಿಸಲು ಪಂಜಾಬ್ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಶುಕ್ರವಾರ ಸಚಿವರು ಗಡಿ ಜಿಲ್ಲೆಗಳಲ್ಲಿನ ತುರ್ತು ಸೇವೆಗಳನ್ನು ಪರಿಶೀಲಿಸಲಿದ್ದಾರೆ. ಆಸ್ಪತ್ರೆಗಳು, ಅಗ್ನಿಶಾಮಕ ಕೇಂದ್ರಗಳನ್ನು, ಪಡಿತರ ಮತ್ತು ತುರ್ತು ಸೇವೆಗಳ ಲಭ್ಯತೆಯನ್ನು ಪರಿಶೀಲಿಸಲಿದ್ದಾರೆ. ಸಂಪುಟ ಸಚಿವರು ಗಡಿ ಜಿಲ್ಲೆಗಳನ್ನು ತಲುಪಲಿದ್ದಾರೆ, ಸಂಪುಟ ಸಭೆಯ ನಂತರ, 10 ಸಚಿವರು ಗಡಿ ಪ್ರದೇಶಗಳಿಗೆ ತೆರಳಲಿದ್ದಾರೆ. ಸಚಿವರಾದ ಲಾಲ್ ಚಂದ್ ಕಟರುಚಕ್ ಮತ್ತು ಡಾ. ರಾವ್ಜೋತ್ ಸಿಂಗ್ ಗುರುದಾಸ್ಪುರಕ್ಕೆ ತೆರಳಲಿದ್ದಾರೆ. ಸಚಿವರಾದ ಕುಲದೀಪ್ ಧಲಿವಾಲ್ ಮತ್ತು ಮೊಹಿಂದರ್ ಭಗತ್ ಅಮೃತಸರದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ: ಪಂಜಾಬ್ ಸಿಎಂಒ
ಜಮ್ಮು ಮತ್ತು ಉಧಂಪುರದಿಂದ ದೆಹಲಿಗೆ 3 ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧಾರ
ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರೈಲ್ವೆ ಜಮ್ಮು ಮತ್ತು ಉಧಂಪುರದಿಂದ ದೆಹಲಿಗೆ ಮೂರು ವಿಶೇಷ ರೈಲುಗಳನ್ನು ಓಡಿಸಲು ಯೋಜಿಸಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.
ಭಾರತ ಮತ್ತು ಪಾಕಿಸ್ತಾನ ಸಂಯಮದಿಂದ ವರ್ತಿಸುವಂತೆ, ಅಂತರರಾಷ್ಟ್ರೀಯ ಕಾನೂನನ್ನು ಪಾಲಿಸುವಂತೆ ಚೀನಾ ಒತ್ತಾಯ
ಭಾರತ ಮತ್ತು ಪಾಕಿಸ್ತಾನದ ನಡುವಿನ ಪ್ರಸ್ತುತ ಪರಿಸ್ಥಿತಿಯ ಕುರಿತು ನಾವು ನಿನ್ನೆ ಚೀನಾದ ನಿಲುವನ್ನು ಹಂಚಿಕೊಂಡಿದ್ದೇವೆ. ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ಭಾರತ ಮತ್ತು ಪಾಕಿಸ್ತಾನ ಪರಸ್ಪರರ ನೆರೆಹೊರೆಯವರು ಮತ್ತು ಯಾವಾಗಲೂ ಇರುತ್ತಾರೆ. ಅವರಿಬ್ಬರೂ ಚೀನಾದ ನೆರೆಹೊರೆಯವರು. ಚೀನಾ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಶಾಂತಿ ಮತ್ತು ಸ್ಥಿರತೆಯ ದೊಡ್ಡ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸಲು, ಯುಎನ್ ಚಾರ್ಟರ್ ಸೇರಿದಂತೆ ಅಂತರರಾಷ್ಟ್ರೀಯ ಕಾನೂನನ್ನು ಪಾಲಿಸಲು, ಶಾಂತವಾಗಿರಲು, ಸಂಯಮವನ್ನು ಕಾಪಾಡಿಕೊಳ್ಳಲು ಮತ್ತು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸುವ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ತಡೆಯಲು ನಾವು ಎರಡೂ ಕಡೆಯವರನ್ನು ಒತ್ತಾಯಿಸುತ್ತೇವೆ. ಪ್ರಸ್ತುತ ಉದ್ವಿಗ್ನತೆಯನ್ನು ಶಮನಗೊಳಿಸುವಲ್ಲಿ ರಚನಾತ್ಮಕ ಪಾತ್ರವನ್ನು ವಹಿಸುವುದನ್ನು ಮುಂದುವರಿಸಲು ನಾವು ಉಳಿದ ಅಂತರರಾಷ್ಟ್ರೀಯ ಸಮುದಾಯದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ತಿಳಿಸಿದ್ದಾರೆ.
ಚಂಡೀಗಢದಲ್ಲಿ ಸಂಭವನೀಯ ವಾಯುದಾಳಿಯ ಬಗ್ಗೆ ಸೈರನ್ಗಳು ಮೊಳಗುತ್ತಿವೆ
ವಾಯುಪಡೆಯ ನಿಲ್ದಾಣದಿಂದ ಸಂಭವನೀಯ ದಾಳಿಯ ಬಗ್ಗೆ ವಾಯು ಎಚ್ಚರಿಕೆ ಬಂದಿದೆ. ಸೈರನ್ಗಳು ಮೊಳಗುತ್ತಿವೆ. ಎಲ್ಲರೂ ಒಳಾಂಗಣದಲ್ಲಿಯೇ ಇರುವಂತೆ ಮತ್ತು ಬಾಲ್ಕನಿಗಳಿಂದ ದೂರವಿರುವಂತೆ ಸೂಚಿಸಲಾಗಿದೆ ಎಂದು ಚಂಡೀಗಢದ ಡಿಸಿ ತಿಳಿಸಿದ್ದಾರೆ.
ಎಲ್ಒಸಿ ಬಳಿ ಪಾಕಿಸ್ತಾನಿ ಪಡೆಗಳ ಶೆಲ್ ದಾಳಿ, ಮಹಿಳೆ ಸಾವು
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನ ನಿಯಂತ್ರಣ ರೇಖೆಯ (ಎಲ್ಒಸಿ) ಬಳಿಯ ಪ್ರದೇಶಗಳಲ್ಲಿ ಪಾಕಿಸ್ತಾನಿ ಪಡೆಗಳು ಭಾರೀ ಶೆಲ್ ದಾಳಿ ನಡೆಸಿದ್ದು, ಒಬ್ಬ ಮಹಿಳೆ ಮೃತಪಟ್ಟಿದ್ದು, ಅವರ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಪಾಕಿಸ್ತಾನಿ ಪಡೆಗಳು ಎಲ್ಒಸಿ ಉದ್ದಕ್ಕೂ ಕದನ ವಿರಾಮವನ್ನು ಉಲ್ಲಂಘಿಸಿ ಗುರುವಾರ ರಾತ್ರಿ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ನಲ್ಲಿರುವ ನಾಗರಿಕ ಪ್ರದೇಶಗಳಲ್ಲಿ ಭಾರೀ ಶೆಲ್ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನವು ಸಿಲಿಕೋಟ್, ಬೋನಿಯಾರ್, ಕಮಲ್ಕೋಟ್, ಮೊಹ್ರಾ ಮತ್ತು ಜಿಂಗಲ್ ಸೇರಿದಂತೆ ಉರಿಯ ಹಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ. ಈ ಭಾರೀ ಶೆಲ್ ದಾಳಿಯು ಹಲವಾರು ಕಟ್ಟಡಗಳಿಗೆ ಹಾನಿಯನ್ನುಂಟುಮಾಡಿತು. ಇದರಿಂದ ಜನರು ದಿಕ್ಕಾಪಾಲಾಗಿ ಓಡಿದರು.
ಶೆಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಮೊಹ್ರಾ ಬಳಿ ಶೆಲ್ ಅವರ ಕಾರಿಗೆ ಡಿಕ್ಕಿ ಹೊಡೆದು ಒಂದು ಕುಟುಂಬದ ಮೂವರು ಸದಸ್ಯರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ನರ್ಗಿಸ್ ಬೇಗಂ ಎಂದು ಗುರುತಿಸಲಾದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯನ್ನು ವಿಫಲಗೊಳಿಸಿದ ಭಾರರತ ಸೇನೆ
ಪಾಕಿಸ್ತಾನ ಸಶಸ್ತ್ರ ಪಡೆಗಳು ಮೇ 08 ಮತ್ತು 09 ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್ಗಳು ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದವು. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆಗಳನ್ನು (CFV) ನಡೆಸಿದ್ದವು. ಈ ಡ್ರೋನ್ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಯಿತು ಮತ್ತು CFV ಗಳಿಗೆ ಸೂಕ್ತ ಉತ್ತರವನ್ನು ನೀಡಲಾಯಿತು.ದ
ರಕ್ಷಣಾ ಸಚಿವಾಲಯದಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆಗಾಗಿ ತ್ರಿ-ಸೇನಾಪಡೆ ಮುಖ್ಯಸ್ಥರು