ರಾಯಲ್ ಚಾಲೆಂಜರ್ಸ್ ಬೆಂಗಳೂರುತಂಡದ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ವಿಚಾರವು ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎನ್ನಲಾಗಿದೆ. ಘಟನೆಯು ಕೇವಲ ರಾಜ್ಯ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿರುವುದರಿಂದ ಸರ್ಕಾರದ ವಿರುದ್ಧ ಆಕ್ಷೇಪಗಳು ವ್ಯಕ್ತಗೊಂಡಿವೆ. ಹೀಗಾಗಿ ಸಂಪುಟ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಲು ಹಲವಾರು ಸಚಿವರು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ವಿಜಯೋತ್ಸವದಲ್ಲಿ ಸುಮಾರು 2-3 ಲಕ್ಷ ಜನರು ಸೇರಿದ್ದರು. ಈ ಅನಿರೀಕ್ಷಿತ ಜನಸಂದಣಿ ನಿಯಂತ್ರಿಸಲು ಭದ್ರತಾ ವ್ಯವಸ್ಥೆ ವಿಫಲವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಪ್ರಕಾರ, ಗೇಟ್ 7ರ ಬಳಿ "ಉಚಿತ ಟಿಕೆಟ್" ಎಂಬ ವದಂತಿ ಹರಡಿದ್ದರಿಂದ ಜನರು ಒಳನುಗ್ಗಲು ಯತ್ನಿಸಿದರು. ಇದೇ ಸಂದರ್ಭದಲ್ಲಿ ಉಂಟಾದ ಗೊಂದಲ ಮತ್ತು ನೂಕುನುಗ್ಗಲು ಕಾಲ್ತುಳಿತಕ್ಕೆ ಕಾರಣವಾಯಿತು. ಮೃತಪಟ್ಟವರಲ್ಲಿ ಹೆಚ್ಚಿನವರು ಯುವಕರು ಮತ್ತು ವಿದ್ಯಾರ್ಥಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ ಈ ಎಲ್ಲ ವಿಚಾರಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ. ಈ ದುರಂತಕ್ಕೆ ಯಾರು ಜವಾಬ್ದಾರರು ಎಂಬುದು ಸಭೆಯಲ್ಲಿ ಚರ್ಚೆಯಾಗಲಿದೆ. ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (ಕೆಸಿಎ) ಆಯೋಜನೆಯ ಹೊಣೆಗಾರಿಕೆಯನ್ನು ಹೊಂದಿದ್ದರೂ, ಭದ್ರತಾ ನಿರ್ವಹಣೆ ರಾಜ್ಯ ಪೊಲೀಸ್ ಇಲಾಖೆಯದ್ದಾಗಿತ್ತು. ಕೇವಲ 2,000 ಪೊಲೀಸ್ ಸಿಬ್ಬಂದಿಯನ್ನು 2-3 ಲಕ್ಷ ಜನರನ್ನು ನಿಯಂತ್ರಿಸಲು ನಿಯೋಜಿಸಿದ್ದು ಭದ್ರತಾ ವೈಫಲ್ಯಕ್ಕೆ ಕಾರಣವಾಯಿತೇ ಎಂಬ ಆರೋಪಗಳ ಕುರಿತು ಪ್ರಶ್ನೆಗಳು ಸಭೆಯಲ್ಲಿ ಏಳಲಿವೆ. ಸಂಭ್ರಮಾಚರಣೆಯನ್ನು ತರಾತುರಿಯಲ್ಲಿ ಆಯೋಜಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ದೊಡ್ಡ ಸಂಖ್ಯೆಯ ಜನ ಸೇರುವ ನಿರೀಕ್ಷೆಯಿದ್ದರೂ ಸೂಕ್ತ ಯೋಜನೆ ರೂಪಿಸದಿರುವುದು ಏಕೆ ಎಂಬ ಪ್ರಶ್ನೆಗಳು ಸಚಿವರ ವಲಯದಲ್ಲೇ ಎದ್ದಿವೆ. ವಿಜಯ ಪಥಯಾತ್ರೆಯ ಕುರಿತು ಆರ್ಸಿಬಿಯ ಸಾಮಾಜಿಕ ಮಾಧ್ಯಮ ಘೋಷಣೆ ಮತ್ತು ಗೃಹ ಸಚಿವರ ಪ್ರಕಟಣೆಗಳ ನಡುವಿನ ಗೊಂದಲವೂ ಚರ್ಚೆಯಾಗಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಘಟನೆಯ ಸಮಗ್ರ ತನಿಖೆ, ಭದ್ರತಾ ಕ್ರಮಗಳ ಸುಧಾರಣೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಮೃತರ ಕುಟುಂಬಗಳಿಗೆ ಮತ್ತಷ್ಟು ಬೆಂಬಲ ಹಾಗೂ ಕೆಸಿಎಯ ಪಾತ್ರದ ಕುರಿತು ಮಹತ್ವದ ತೀರ್ಮಾನಗಳನ್ನು ನಿರೀಕ್ಷಿಸಲಾಗಿದೆ. ಪರಿಶೀಲನೆಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಮ್ಯಾಜಿಸ್ಟೀರಿಯಲ್ ತನಿಖೆ ಆರಂಭವಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದು, ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಲ್ತುಳಿತಕ್ಕೂ ಮುನ್ನ ಹಾಗೂ ನಂತರದ ಸನ್ನಿವೇಶಗಳ ಕುರಿತು ಮಾಹಿತಿ ಪಡೆದರು. ಅಲ್ಲದೇ ಕಾಲ್ತುಳಿತ ಸಂಭವಿಸಿದ ಸ್ಥಳಗಳನ್ನು ಪರಿಶೀಲಿಸಿದರು.ಇದಕ್ಕೂ ಮುನ್ನ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಕೂಡ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಇನ್ನು ಮುಂದೆ ಬೃಹತ್ ಸಮಾರಂಭ, ಮೆರವಣಿಗೆ, ಸಭೆ ಹಾಗೂ ವಿಜಯೋತ್ಸವಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಲು ನಿರ್ಧರಿಸಲಾಗಿದೆ.ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿ ರಾಷ್ಟ್ರ ನಾಯಕರಲ್ಲದೆ ಇತರ ದೇಶಗಳ ನಾಯಕರೂ ಆಘಾತ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಅವರೂ ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ವಿಷಾದ ವ್ಯಕ್ತಪಡಿಸಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ‘ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತಲ್ಲಾದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಆಶಿಸಿದ್ದಾರೆ.ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಬೆಂಗಳೂರಿನಲ್ಲಿ ನಡೆದ ದುರಂತಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ‘ಬೆಂಗಳೂರಿನ ದುರಂತದಲ್ಲಿ ಮೃತರಾದವರ ಸಂಬಂಧಿಗಳು ಮತ್ತು ಗಾಯಗೊಂಡವರ ನೋವಿನಲ್ಲಿ ನಾನು ಮತ್ತು ಅಕ್ಷತಾನ (ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಮಗಳು) ಭಾಗಿಯಾಗಿದ್ದೇವೆ. ನಾವು ನಿಮ್ಮೊಂದಿಗೆ ಸಂಭ್ರಮಾಚಾರಣೆ ಮಾಡಿದ್ದೆವು; ಆದರೆ, ಈಗ ಶೋಕಾಚರಣೆ ಮಾಡುತ್ತಿದ್ದೇವೆ’ ಎಂದು ನೋವು ಹಂಚಿಕೊಂಡಿದ್ದಾರೆ.ಬುಧವಾರ ಏನಾಯಿತು?ಐಪಿಎಲ್ 2025ನಲ್ಲಿ ಐತಿಹಾಸಿಕ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. 18 ವರ್ಷಗಳ ನಿರೀಕ್ಷೆಯ ನಂತರ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಗೆದ್ದ ಆರ್ಸಿಬಿ ತಂಡಕ್ಕೆ ನಗರದೆಲ್ಲೆಡೆ ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ಬುಧವಾರ ಮಧ್ಯಾಹ್ನ ತಂಡವು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗಲೇ ಸಾವಿರಾರು ಅಭಿಮಾನಿಗಳು ತಂಡವನ್ನು ಬರಮಾಡಿಕೊಂಡರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವೈಯಕ್ತಿಕವಾಗಿ ವಿರಾಟ್ ಕೊಹ್ಲಿ ಮತ್ತು ಆಟಗಾರರನ್ನು ಸ್ವಾಗತಿಸಿ, ಅವರಿಗೆ ಬೊಕೆ ಹಾಗೂ ಆರ್ಸಿಬಿ ಮತ್ತು ಕನ್ನಡ ಬಾವುಟಗಳನ್ನು ನೀಡಿ ಗೌರವಿಸಿದರು. ವಿಜಯೋತ್ಸವದ ಪ್ರಮುಖ ಭಾಗವಾಗಿ, ಆರ್ಸಿಬಿ ತಂಡದ ಆಟಗಾರರು ವಿಧಾನಸೌಧದ ಮೆಟ್ಟಿಲುಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ಸಚಿವರಿಂದ ಅಧಿಕೃತ ಸನ್ಮಾನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹಲವು ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ತಂಡದ ನಾಯಕ ರಜತ್ ಪಟೀದಾರ್, ವಿರಾಟ್ ಕೊಹ್ಲಿ, ಮತ್ತು ಇತರ ಆಟಗಾರರು ಭಾಗವಹಿಸುತ್ತಾರೆ. ಸನ್ಮಾನ ನಂತರ, ತಂಡದ ಆಟಗಾರರು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಬಸ್ನಲ್ಲಿ ಸಾಗಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿತ್ತು; ಮೂರು ಡಿಸಿಪಿಗಳು, ಒಂಬತ್ತು ಎಸಿಪಿಗಳು, ಹನ್ನೆರಡು ಇನ್ಸ್ಪೆಕ್ಟರ್ಗಳು ಮತ್ತು ಹಲವಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರುತಂಡದ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ವಿಚಾರವು ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎನ್ನಲಾಗಿದೆ. ಘಟನೆಯು ಕೇವಲ ರಾಜ್ಯ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿರುವುದರಿಂದ ಸರ್ಕಾರದ ವಿರುದ್ಧ ಆಕ್ಷೇಪಗಳು ವ್ಯಕ್ತಗೊಂಡಿವೆ. ಹೀಗಾಗಿ ಸಂಪುಟ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಲು ಹಲವಾರು ಸಚಿವರು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ವಿಜಯೋತ್ಸವದಲ್ಲಿ ಸುಮಾರು 2-3 ಲಕ್ಷ ಜನರು ಸೇರಿದ್ದರು. ಈ ಅನಿರೀಕ್ಷಿತ ಜನಸಂದಣಿ ನಿಯಂತ್ರಿಸಲು ಭದ್ರತಾ ವ್ಯವಸ್ಥೆ ವಿಫಲವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಪ್ರಕಾರ, ಗೇಟ್ 7ರ ಬಳಿ "ಉಚಿತ ಟಿಕೆಟ್" ಎಂಬ ವದಂತಿ ಹರಡಿದ್ದರಿಂದ ಜನರು ಒಳನುಗ್ಗಲು ಯತ್ನಿಸಿದರು. ಇದೇ ಸಂದರ್ಭದಲ್ಲಿ ಉಂಟಾದ ಗೊಂದಲ ಮತ್ತು ನೂಕುನುಗ್ಗಲು ಕಾಲ್ತುಳಿತಕ್ಕೆ ಕಾರಣವಾಯಿತು. ಮೃತಪಟ್ಟವರಲ್ಲಿ ಹೆಚ್ಚಿನವರು ಯುವಕರು ಮತ್ತು ವಿದ್ಯಾರ್ಥಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ ಈ ಎಲ್ಲ ವಿಚಾರಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ. ಈ ದುರಂತಕ್ಕೆ ಯಾರು ಜವಾಬ್ದಾರರು ಎಂಬುದು ಸಭೆಯಲ್ಲಿ ಚರ್ಚೆಯಾಗಲಿದೆ. ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (ಕೆಸಿಎ) ಆಯೋಜನೆಯ ಹೊಣೆಗಾರಿಕೆಯನ್ನು ಹೊಂದಿದ್ದರೂ, ಭದ್ರತಾ ನಿರ್ವಹಣೆ ರಾಜ್ಯ ಪೊಲೀಸ್ ಇಲಾಖೆಯದ್ದಾಗಿತ್ತು. ಕೇವಲ 2,000 ಪೊಲೀಸ್ ಸಿಬ್ಬಂದಿಯನ್ನು 2-3 ಲಕ್ಷ ಜನರನ್ನು ನಿಯಂತ್ರಿಸಲು ನಿಯೋಜಿಸಿದ್ದು ಭದ್ರತಾ ವೈಫಲ್ಯಕ್ಕೆ ಕಾರಣವಾಯಿತೇ ಎಂಬ ಆರೋಪಗಳ ಕುರಿತು ಪ್ರಶ್ನೆಗಳು ಸಭೆಯಲ್ಲಿ ಏಳಲಿವೆ. ಸಂಭ್ರಮಾಚರಣೆಯನ್ನು ತರಾತುರಿಯಲ್ಲಿ ಆಯೋಜಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ದೊಡ್ಡ ಸಂಖ್ಯೆಯ ಜನ ಸೇರುವ ನಿರೀಕ್ಷೆಯಿದ್ದರೂ ಸೂಕ್ತ ಯೋಜನೆ ರೂಪಿಸದಿರುವುದು ಏಕೆ ಎಂಬ ಪ್ರಶ್ನೆಗಳು ಸಚಿವರ ವಲಯದಲ್ಲೇ ಎದ್ದಿವೆ. ವಿಜಯ ಪಥಯಾತ್ರೆಯ ಕುರಿತು ಆರ್ಸಿಬಿಯ ಸಾಮಾಜಿಕ ಮಾಧ್ಯಮ ಘೋಷಣೆ ಮತ್ತು ಗೃಹ ಸಚಿವರ ಪ್ರಕಟಣೆಗಳ ನಡುವಿನ ಗೊಂದಲವೂ ಚರ್ಚೆಯಾಗಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಘಟನೆಯ ಸಮಗ್ರ ತನಿಖೆ, ಭದ್ರತಾ ಕ್ರಮಗಳ ಸುಧಾರಣೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಮೃತರ ಕುಟುಂಬಗಳಿಗೆ ಮತ್ತಷ್ಟು ಬೆಂಬಲ ಹಾಗೂ ಕೆಸಿಎಯ ಪಾತ್ರದ ಕುರಿತು ಮಹತ್ವದ ತೀರ್ಮಾನಗಳನ್ನು ನಿರೀಕ್ಷಿಸಲಾಗಿದೆ. ಪರಿಶೀಲನೆಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಮ್ಯಾಜಿಸ್ಟೀರಿಯಲ್ ತನಿಖೆ ಆರಂಭವಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದು, ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಲ್ತುಳಿತಕ್ಕೂ ಮುನ್ನ ಹಾಗೂ ನಂತರದ ಸನ್ನಿವೇಶಗಳ ಕುರಿತು ಮಾಹಿತಿ ಪಡೆದರು. ಅಲ್ಲದೇ ಕಾಲ್ತುಳಿತ ಸಂಭವಿಸಿದ ಸ್ಥಳಗಳನ್ನು ಪರಿಶೀಲಿಸಿದರು.ಇದಕ್ಕೂ ಮುನ್ನ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಕೂಡ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಇನ್ನು ಮುಂದೆ ಬೃಹತ್ ಸಮಾರಂಭ, ಮೆರವಣಿಗೆ, ಸಭೆ ಹಾಗೂ ವಿಜಯೋತ್ಸವಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಲು ನಿರ್ಧರಿಸಲಾಗಿದೆ.ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿ ರಾಷ್ಟ್ರ ನಾಯಕರಲ್ಲದೆ ಇತರ ದೇಶಗಳ ನಾಯಕರೂ ಆಘಾತ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಅವರೂ ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ವಿಷಾದ ವ್ಯಕ್ತಪಡಿಸಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ‘ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತಲ್ಲಾದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಆಶಿಸಿದ್ದಾರೆ.ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಬೆಂಗಳೂರಿನಲ್ಲಿ ನಡೆದ ದುರಂತಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ‘ಬೆಂಗಳೂರಿನ ದುರಂತದಲ್ಲಿ ಮೃತರಾದವರ ಸಂಬಂಧಿಗಳು ಮತ್ತು ಗಾಯಗೊಂಡವರ ನೋವಿನಲ್ಲಿ ನಾನು ಮತ್ತು ಅಕ್ಷತಾನ (ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಮಗಳು) ಭಾಗಿಯಾಗಿದ್ದೇವೆ. ನಾವು ನಿಮ್ಮೊಂದಿಗೆ ಸಂಭ್ರಮಾಚಾರಣೆ ಮಾಡಿದ್ದೆವು; ಆದರೆ, ಈಗ ಶೋಕಾಚರಣೆ ಮಾಡುತ್ತಿದ್ದೇವೆ’ ಎಂದು ನೋವು ಹಂಚಿಕೊಂಡಿದ್ದಾರೆ.ಬುಧವಾರ ಏನಾಯಿತು?ಐಪಿಎಲ್ 2025ನಲ್ಲಿ ಐತಿಹಾಸಿಕ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. 18 ವರ್ಷಗಳ ನಿರೀಕ್ಷೆಯ ನಂತರ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಗೆದ್ದ ಆರ್ಸಿಬಿ ತಂಡಕ್ಕೆ ನಗರದೆಲ್ಲೆಡೆ ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ಬುಧವಾರ ಮಧ್ಯಾಹ್ನ ತಂಡವು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗಲೇ ಸಾವಿರಾರು ಅಭಿಮಾನಿಗಳು ತಂಡವನ್ನು ಬರಮಾಡಿಕೊಂಡರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವೈಯಕ್ತಿಕವಾಗಿ ವಿರಾಟ್ ಕೊಹ್ಲಿ ಮತ್ತು ಆಟಗಾರರನ್ನು ಸ್ವಾಗತಿಸಿ, ಅವರಿಗೆ ಬೊಕೆ ಹಾಗೂ ಆರ್ಸಿಬಿ ಮತ್ತು ಕನ್ನಡ ಬಾವುಟಗಳನ್ನು ನೀಡಿ ಗೌರವಿಸಿದರು. ವಿಜಯೋತ್ಸವದ ಪ್ರಮುಖ ಭಾಗವಾಗಿ, ಆರ್ಸಿಬಿ ತಂಡದ ಆಟಗಾರರು ವಿಧಾನಸೌಧದ ಮೆಟ್ಟಿಲುಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ಸಚಿವರಿಂದ ಅಧಿಕೃತ ಸನ್ಮಾನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹಲವು ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ತಂಡದ ನಾಯಕ ರಜತ್ ಪಟೀದಾರ್, ವಿರಾಟ್ ಕೊಹ್ಲಿ, ಮತ್ತು ಇತರ ಆಟಗಾರರು ಭಾಗವಹಿಸುತ್ತಾರೆ. ಸನ್ಮಾನ ನಂತರ, ತಂಡದ ಆಟಗಾರರು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಬಸ್ನಲ್ಲಿ ಸಾಗಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿತ್ತು; ಮೂರು ಡಿಸಿಪಿಗಳು, ಒಂಬತ್ತು ಎಸಿಪಿಗಳು, ಹನ್ನೆರಡು ಇನ್ಸ್ಪೆಕ್ಟರ್ಗಳು ಮತ್ತು ಹಲವಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.