ನಟ ದರ್ಶನ್‌ಗೆ ಪರೋಕ್ಷ ಟಾಂಗ್ ಕೊಟ್ರ ನಟ ಜಗ್ಗೇಶ್‌!

ಸರ್ವ ಆತ್ಮಾನೇನ ಬ್ರಹ್ಮ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ.

Update: 2024-06-12 08:03 GMT
ನಟ ದರ್ಶನ್‌ ಮತ್ತು ಜಗ್ಗೇಶ್‌
Click the Play button to listen to article

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ನಟ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಈಗಾಗಲೇ ಅರೆಸ್ಟ್‌ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಕೆಲವು ಸೆಲೆಬ್ರಿಟಿಗಳು ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ʼಸರ್ವ ಆತ್ಮಾನೇನ ಬ್ರಹ್ಮʼ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ.

‘ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ತಕ್ಷಣ ಫಲಿತಾಂಶ ಉಂಟು. ರಾಮನಾಗು, ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’ ಎಂದು ಅವರು ಬರೆದಿದ್ದಾರೆ. ʼಮದಕ್ಕೆ ಕಾರುಣ್ಯದ ಅರಿವಿಲ್ಲಾ’ ಎನ್ನುವ ವಾಕ್ಯವನ್ನೂ ಜಗ್ಗೇಶ್ ಬಳಸಿದ್ದಾರೆ. ಅಂದರೆ ಮದ ಇದ್ದವನಿಗೆ ಕರುಣೆ ಎಂಬುದೆಲ್ಲ ಇರುವುದಿಲ್ಲ ಎಂಬುದು ಈ ವಾಕ್ಯದ ಅರ್ಥ.

ಟ್ವೀಟ್‌ ಎಲ್ಲಡೆ ವೈರಲ್‌ ಆಗುತ್ತಿದ್ದು, ಬಹಳ ಚರ್ಚೆಗೆ ಗ್ರಾಸವಾಗುತ್ತಿದೆ. ದರ್ಶನ್ ಅವರ ಹೆಸರನ್ನು ಎಲ್ಲೂ ಪ್ರಸ್ತಾಪಿಸದ ನಟ ಜಗ್ಗೇಶ್‌, ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ ಎನ್ನಲಾಗಿದೆ.

Tags:    

Similar News