ಹತ್ರಾಸ್ ಕಾಲ್ತುಳಿತ: 5 ಸದಸ್ಯರ ತಜ್ಞರ ಸಮಿತಿಗೆ ಸುಪ್ರೀಂಗೆ ಮನವಿ

Update: 2024-07-03 10:36 GMT

ಹೊಸದಿಲ್ಲಿ, ಜು.3- 121 ಜನರ ಸಾವಿಗೆ ಕಾರಣವಾದ ಹತ್ರಾಸ್ ಕಾಲ್ತುಳಿತ ಘಟನೆಯ ತನಿಖೆಗೆ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಐದು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಅರ್ಜಿ ಸಲ್ಲಿಕೆಯಾಗಿದೆ.

ವಕೀಲ ವಿಶಾಲ್ ತಿವಾರಿ ಅವರು ಸಲ್ಲಿಸಿದ ಮನವಿಯಲ್ಲಿ ಜುಲೈ 2 ರ ಘಟನೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸಲು ಮತ್ತು ಅಧಿಕಾರಿಗಳು ಹಾಗೂ ಇತರರ ನಿರ್ಲಕ್ಷ್ಯದ ನಡವಳಿಕೆಗಾಗಿ ಕಾನೂನು ಕ್ರಮ ಪ್ರಾರಂಭಿಸಲು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ.

ಸಂಭವನೀಯ ಕಾಲ್ತುಳಿತದ ಘಟನೆಗಳನ್ನು ನಿರ್ವಹಿಸಲು ಬ್ಲಾಕ್ / ತಹಸಿಲ್‌ನಿಂದ ಜಿಲ್ಲಾ ಮಟ್ಟದವರೆಗೆ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳ ಕುರಿತು ವಿವರ ಸಲ್ಲಿಸಲು ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದೆ.

ಸಾಕಾರ್ ವಿಶ್ವ ಹರಿ ಭೋಲೆ ಬಾಬಾ ನಡೆಸಿಕೊಟ್ಟ ಸತ್ಸಂಗಕ್ಕೆ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ 2.5 ಲಕ್ಷಕ್ಕೂ ಹೆಚ್ಚು ಭಕ್ತರು ಜಮಾಯಿಸಿದ್ದರು. ಆನಂತರ ಸಂಭವಿಸಿದ ಕಾಲ್ತುಳಿತದಿಂದ 121 ಮಂದಿ ಮೃತಪಟ್ಟಿದ್ದಾರೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು. 

Tags:    

Similar News