ಕೇಜ್ರಿವಾಲ್ ನ್ಯಾಯಾಂಗಬಂಧನ ಆಗಸ್ಟ್ 20ರವರೆಗೆ ವಿಸ್ತರಣೆ

Update: 2024-08-08 12:04 GMT

ಹೊಸದಿಲ್ಲಿ, ಆ.8: ಅಬಕಾರಿ ಹಗರಣದಲ್ಲಿ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಆಗಸ್ಟ್ 20 ರವರೆಗೆ ಗುರುವಾರ ವಿಸ್ತರಿಸಿದೆ.

ಕೇಜ್ರಿವಾಲ್ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕಸ್ಟಡಿಯನ್ನು ವಿಸ್ತರಿಸಿದರು.

ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಸಿಬಿಐ ಸಲ್ಲಿಸಿರುವ ಪೂರಕ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯ ಆಗಸ್ಟ್ 12 ರಂದು ಪರಿಗಣಿಸುವ ಸಾಧ್ಯತೆಯಿದೆ. 

Tags:    

Similar News