ಆರ್ ಜಿ ಕರ್ ಕಾಲೇಜಿನ ಮಾಜಿ ಪ್ರಾಂಶುಪಾಲರಿಗೆ ಶೋಕಾಸ್ ನೋಟಿಸ್ ಜಾರಿ

ಆರೋಗ್ಯ ಸೌಲಭ್ಯದಲ್ಲಿ ಹಣಕಾಸಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕೋಲ್ಕತ್ತಾದ ಆರ್‌ ಜಿ ಕಾರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಬಂಧಿಸಿರುವ ಪಶ್ಚಿಮ ಬಂಗಾಳದ ವೈದ್ಯಕೀಯ ಮಂಡಳಿ ಶನಿವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Update: 2024-09-08 05:54 GMT
ಘೋಷ್ ಅವರ ವೈದ್ಯಕೀಯ ನೋಂದಣಿಯನ್ನು ರದ್ದುಗೊಳಿಸುವ ಕುರಿತು ಕೌನ್ಸಿಲ್ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಘೋಷ್‌ಗೆ 'ಶೋಕಾಸ್ ನೋಟಿಸ್' ಒಂದು ಹೆಜ್ಜೆಯಾಗಿದೆ.
Click the Play button to listen to article

ಆರೋಗ್ಯ ಸೌಲಭ್ಯದಲ್ಲಿ ಹಣಕಾಸಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕೋಲ್ಕತ್ತಾದ ಆರ್‌ ಜಿ ಕಾರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್   ಅವರಿಗೆ ಪಶ್ಚಿಮ ಬಂಗಾಳದ ವೈದ್ಯಕೀಯ ಮಂಡಳಿ ಶನಿವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘೋಷ್ ಅವರ ವೈದ್ಯಕೀಯ ನೋಂದಣಿಯನ್ನು ರದ್ದುಗೊಳಿಸುವ ಕುರಿತು ವೈದ್ಯಕೀಯ ಮಂಡಳಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಅವರಿಗೆ 'ಶೋಕಾಸ್ ನೋಟಿಸ್' ಒಂದು ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.

“ಡಾಕ್ಟರ್ ಘೋಷ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಅದಕ್ಕೆ ಉತ್ತರಿಸಲು ನಾವು ಅವರಿಗೆ ಮೂರು ದಿನಗಳ ಕಾಲಾವಕಾಶ ನೀಡಿದ್ದೇವೆ ಎಂದು ಅಧಿಕಾರಿ  ತಿಳಿಸಿದ್ದಾರೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಘೋಷ್ ಅವರನ್ನು ಬಂಧಿಸಿದೆ. ಆಗಸ್ಟ್ 9 ರಂದು ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಬಳಿಕ ಆಸ್ಪತ್ರೆಯಲ್ಲಿ ಹಣಕಾಸಿನ ಅವ್ಯವಹಾರದ ಆರೋಪಗಳು ಬೆಳಕಿಗೆ ಬಂದವು.

ಆರೋಗ್ಯ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದಾಗ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು. ಇತರ ಮೂವರು ವೈದ್ಯರು ತಮ್ಮ ವಿರುದ್ಧದ ಆರೋಪಗಳಿಂದ ಹೊರಬರುವವರೆಗೆ  ವೈದ್ಯಕೀಯ ಮಂಡಳಿ ಯಾವುದೇ ಚಟುವಟಿಕೆಯಿಂದ ಭಾಗವಹಿಸಿದಂತೆ ಅಧಿಕಾರಿಗಳು ಸೂಚಿಸಿದ್ದಾರೆ.  ಘೋಷ್ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಮೂವರು ವೈದ್ಯರು ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಇತರ ವೈದ್ಯರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ, ಈ ಸಂಬಂಧ ಬಂಗಾಳದ ವೈದ್ಯಕೀಯ ಮಂಡಳಿ ಹಲವಾರು ದೂರುಗಳು ಬಂದಿವೆ ಎಂದು ಅವರು ಹೇಳಿದರು.

ಇತರ ಮೂವರು ವೈದ್ಯರೆಂದರೆ ಬುರ್ದ್ವಾನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ರೆಸಿಡೆಂಟ್ ವೈದ್ಯಕೀಯ ಅಧಿಕಾರಿ ಅವಿಕ್ ಡೇ, ಅದೇ ಸಂಸ್ಥೆಯ ಮಾಜಿ ಹಿರಿಯ ವೈದ್ಯ ಬಿರುಪಾಕ್ಷ ಬಿಸ್ವಾಸ್ ಮತ್ತು ಮಿಡ್ನಾಪುರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯ ಮುಸ್ತಫಿಜುರ್ ರಹಮಾನ್ ಮಲ್ಲಿಕ್. 

Tags:    

Similar News