ತೆಲಂಗಾಣ, ಪುದುಚೇರಿ: ಸಿ.ಪಿ.ರಾಧಾಕೃಷ್ಣನ್ ಅವರಿಗೆ ಹೆಚ್ಚುವರಿ ಜವಾಬ್ದಾರಿ

Update: 2024-03-19 13:08 GMT

ಜಾರ್ಖಂಡ್ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರಿಗೆ ತೆಲಂಗಾಣದ ರಾಜ್ಯಪಾಲ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ‌

ತಮಿಳಿಸೈ ಸೌಂದರರಾಜನ್ ಅವರು ರಾಜೀನಾಮೆ ನೀಡಿದ ನಂತರ ರಾಷ್ಟ್ರಪತಿ  ದ್ರೌಪತಿ ಮುರ್ಮು ಅವರು ಮಂಗಳವಾರ ರಾಧಾಕೃಷ್ಣನ್ ಅವರನ್ನು ತೆಲಂಗಾಣದ ರಾಜ್ಯಪಾಲ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ನೀಡಿದರು. ʻಈ ಅವಕಾಶ ನೀಡಿದ್ದಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರಿಗೆ ಧನ್ಯವಾದʼ ಎಂದು ಎಕ್ಸ್‌ ನಲ್ಲಿ ರಾಧಾಕೃಷ್ಣನ್  ಅವರು  ಬರೆದಿದ್ದಾರೆ.

Tags:    

Similar News