ಸಂಪುಟ ಸಮಿತಿ ರಚನೆ: ಎನ್‌ಡಿಎ ಮಿತ್ರ ಪಕ್ಷಗಳಿಗೂ ಸ್ಥಾನ

Update: 2024-07-04 07:24 GMT

ಮೋದಿ ಸರ್ಕಾರ ರಕ್ಷಣೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತು ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ವಿವಿಧ ಸಂಪುಟ ಸಮಿತಿಗಳನ್ನು ರಚಿಸಿದೆ. 

ಕ್ಯಾಬಿನೆಟ್ ಸಮಿತಿಗಳ ಸದಸ್ಯರಲ್ಲಿ ಬಿಜೆಪಿ ಮತ್ತು ಎನ್‌ಡಿಎ ಪಾಲುದಾರರಾದ ಜನತಾ ದಳ (ಯು), ತೆಲುಗು ದೇಶಂ ಪಕ್ಷ, ಜನತಾ ದಳ (ಎಸ್), ಶಿವಸೇನೆ ಮತ್ತು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್)ಕ್ಕೆ ಸೇರಿದ ಕೇಂದ್ರ ಸಚಿವರು ಸೇರಿದ್ದಾರೆ. 

ರಕ್ಷಣೆ: ರಕ್ಷಣೆ ಸಂಪುಟ ಸಮಿತಿ (ಸಿಸಿಎಸ್)- ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್. ಸಿಸಿಎಸ್‌ ರಕ್ಷಣೆ ಮತ್ತು ಕಾರ್ಯತಂತ್ರ ಕುರಿತ ವ್ಯವಹಾರಗಳಿಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವ ಅತ್ಯುನ್ನತ ಸಮಿತಿಯಾಗಿದೆ.

ಆರ್ಥಿಕ ವ್ಯವಹಾರ: ಈ ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಲ್ಲದೆ, ರಾಜನಾಥ್ ಸಿಂಗ್, ಅಮಿತ್ ಶಾ, ‌ನಿರ್ಮಲಾ ಸೀತಾರಾಮನ್, ಜೈಶಂಕರ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಭಾರೀ ಕೈಗಾರಿಕೆಗಳು ಮತ್ತು ಉಕ್ಕು ಸಚಿವ ಎಚ್‌.ಡಿ. ಕುಮಾರಸ್ವಾಮಿ ಇದ್ದಾರೆ. ಜೊತೆಗೆ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಂಚಾಯತ್ ರಾಜ್ ಹಾಗೂ ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಇರುತ್ತಾರೆ. ಈ ಸಮಿತಿ ಆರ್ಥಿಕತೆ ಮತ್ತು ವ್ಯಾಪಾರದ ವಿಷಯಗಳಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ.

ರಾಜಕೀಯ ವ್ಯವಹಾರಗಳು: ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಪ್ರಧಾನಿ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ‌ನಿತಿನ್ ಗಡ್ಕರಿ,‌ ನಿರ್ಮಲಾ ಸೀತಾರಾಮನ್, ಪಿಯುಷ್ ಗೋಯಲ್, ಆರೋಗ್ಯ ಸಚಿವ ಜೆ.ಪಿ. ನಡ್ಡಾ, ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್ ರಾಮ್ ಮಾಂಝಿ, ಬಂದರು ಮತ್ತು ಹಡಗು ಸಚಿವ ಸರ್ಬಾನಂದ ಸೋನೋವಾಲ್ ಇದ್ದಾರೆ. ಜೊತೆಗೆ, ಪರಿಸರ ಸಚಿವ ಭೂಪೇಂದರ್ ಯಾದವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಕಲ್ಲಿದ್ದಲು ಸಚಿವ ಜಿ ಕಿಶನ್ ರೆಡ್ಡಿಇರುತ್ತಾರೆ. ಅಮಿತಿಯು ದೇಶದ ಪ್ರಮುಖ ರಾಜಕೀಯ ಸಮಸ್ಯೆಗಳನ್ನು ನಿಭಾಯಿಸುತ್ತದೆ.

ಸಂಸದೀಯ ವ್ಯವಹಾರಗಳು: ಈ ಸಮಿತಿಯಲ್ಲಿ ರಾಜನಾಥ್ ಸಿಂಗ್, ಅಮಿತ್ ಶಾ, ಜೆ.ಪಿ. ನಡ್ಡಾ, ನಿರ್ಮಲಾ ಸೀತಾರಾಮನ್, ರಾಜೀವ್ ರಂಜನ್ ಸಿಂಗ್, ಕಿಂಜರಾಪು ರಾಮ್ ಮೋಹನ್ ನಾಯ್ಡು, ಕಿರಣ್‌ ರಿಜಿಜು, ಸಾಮಾಜಿಕ ನ್ಯಾಯ ಸಚಿವ ವೀರೇಂದ್ರ ಕುಮಾರ್, ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಾಮ್ ಮತ್ತು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಇದ್ದಾರೆ.

ವಿಶೇಷ ಆಹ್ವಾನಿತರಾಗಿ ಕಾನೂನು ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಮತ್ತು ಕಾನೂನು ರಾಜ್ಯ ಸಚಿವ ಎಲ್. ಮುರುಗನ್ ಇರುತ್ತಾರೆ. ಸಂಸತ್ತಿನ ಅಧಿವೇಶನಗಳನ್ನು ಕರೆಯುವುದು ಇತ್ಯಾದಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ.

ನೇಮಕ ಸಮಿತಿ: ಈ ಸಮಿತಿಯಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ‌ ಇರುತ್ತಾರೆ. ಸಮಿತಿಯು ದೇಶದ ಉನ್ನತ ಅಧಿಕಾರಶಾಹಿ, ಕಾರ್ಯತಂತ್ರ ಮತ್ತು ರಕ್ಷಣಾ ಕ್ಷೇತ್ರದ ಹುದ್ದೆಗಳಿಗೆ ನೇಮಕ ಮಾಡುತ್ತದೆ.

ಹೂಡಿಕೆ ಮತ್ತು ಅಭಿವೃದ್ಧಿ: ಸಮಿತಿಯಲ್ಲಿ ಪ್ರಧಾನಿ ಮೋದಿ, ರಾಜನಾಥ್ ಸಿಂಗ್, ಶಾ, ಗಡ್ಕರಿ, ನಿರ್ಮಲಾ ಸೀತಾರಾಮನ್, ಪಿಯುಷ್ ಗೋಯಲ್, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಜವಳಿ ಸಚಿವ ಗಿರಿರಾಜ್ ಸಿಂಗ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್‌ ಇರುತ್ತಾರೆ.

ವಿಶೇಷ ಆಹ್ವಾನಿತರಾಗಿ ಸಾಂಖ್ಯಿಕ ಖಾತೆ ರಾಜ್ಯ ಸಚಿವ ರಾವ್ ಇಂದರ್‌ಜಿತ್ ಸಿಂಗ್ ಮತ್ತು ಆಯುಷ್ ಸಚಿವ ಪ್ರತಾಪ್‌ ರಾವ್‌ ಜಾಧವ್ ಇರುತ್ತಾರೆ. ಸಮಿತಿಯು ಹೂಡಿಕೆಗಳು ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸುತ್ತದೆ.

ವಸತಿ: ಸಮಿತಿಯಲ್ಲಿ ಅಮಿತ್‌ ಶಾ , ಗಡ್ಕರಿ, ನಿರ್ಮಲಾ ಸೀತಾರಾಮನ್, ಗೋಯಲ್ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಇರುತ್ತಾರೆ.

ಕೇಂದ್ರ ಸಿಬ್ಬಂದಿ ಮತ್ತು ಪ್ರಧಾನಮಂತ್ರಿ ಅವರ ಕಚೇರಿ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಸಮಿತಿಯಲ್ಲಿ ವಿಶೇಷ ಆಹ್ವಾನಿತರು. ಕೇಂದ್ರ ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ವಸತಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ.

ಕೌಶಲ, ಉದ್ಯೋಗ ಮತ್ತು ಜೀವನೋಪಾಯ: ಪ್ರಧಾನಿ ಮೋದಿ, ರಾಜನಾಥ್ ಸಿಂಗ್, ಶಾ, ಗಡ್ಕರಿ, ನಿರ್ಮಲಾ ಸೀತಾರಾಮನ್,ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್, ಭೂಪೇಂದರ್ ಯಾದವ್, ಹರದೀಪ್ ಪುರಿ, ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯ ಅವರನ್ನು ಒಳಗೊಂಡಿದೆ. ಕೇಂದ್ರ ಕೌಶಲಾಭಿವೃದ್ಧಿ ರಾಜ್ಯ ಸಚಿವ ಜಯಂತ್ ಚೌಧರಿ ವಿಶೇಷ ಆಹ್ವಾನಿತರು. ಸಮಿತಿಯು ಕೌಶಲ, ಉದ್ಯೋಗ ಮತ್ತು ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ವಹಿಸುತ್ತದೆ.

Tags:    

Similar News