ಸಿಪಿಐ(ಎಂ) ಸ್ಥಳೀಯ ಕಾರ್ಯದರ್ಶಿ ಹತ್ಯೆ

Update: 2024-02-23 09:50 GMT

ಕೋಯಿಕ್ಕೋಡ್, ಫೆ. 23 - ಇಲ್ಲಿನ ಕೊಯಿಲಾಂಡಿ ಬಳಿಯ ದೇವಸ್ಥಾನದ ಆವರಣದಲ್ಲಿ ಸಿಪಿಐ(ಎಂ) ಮುಖಂಡನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ರಾತ್ರಿ 10.30ರ ಸುಮಾರಿಗೆ ಪಿ.ವಿ.ಸತ್ಯನಾಥ್ (60) ಅವರ ಮೇಲೆ ಅಭಿಲಾಷ್ (35) ಹರಿತವಾದ ಆಯುಧ ಬಳಸಿ ಹಲ್ಲೆ ನಡೆಸಿದ್ದರು.

ಪ್ರಾಥಮಿಕ ವರದಿಗಳ ಪ್ರಕಾರ, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ. ಸೆಕ್ಷನ್ 302 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ ಗಳಡಿ ಪ್ರಕರಣ ದಾಖಲಿಸಲಾಗಿದೆ.

ದೇವಾಲಯದಲ್ಲಿ ಉತ್ಸವ ನಡೆಯುತ್ತಿತ್ತು. ಆವರಣದಲ್ಲಿ ಸತ್ಯನಾಥ್‌ ಅವರನ್ನು ಕತ್ತರಿಸಿದ ಅಭಿಲಾಷ್‌, ಠಾಣೆಗೆ ಆಗಮಿಸಿ ಶರಣಾಗಿದ್ದಾನೆ. ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಏತನ್ಮಧ್ಯೆ, ಕೊಲೆಯ ಹಿನ್ನೆಲೆಯಲ್ಲಿ ಸಿಪಿಐ(ಎಂ) ಕೊಯಿಲಾಂಡಿಯಲ್ಲಿ ಹರತಾಳಕ್ಕೆ ಕರೆ ನೀಡಿದೆ. 

Tags:    

Similar News