Wayanad Landslide| ವಯನಾಡಿನಲ್ಲಿ ಸರಣಿ ಭೂಕುಸಿತ; 110 ಸಾವು, 128 ಮಂದಿಗೆ ಗಾಯ, 500 ಕುಟುಂಬ ಸಂಪರ್ಕ ಕಡಿತ

Update: 2024-07-30 03:27 GMT
Live Updates - Page 3
2024-07-30 11:07 GMT

ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಸಂಪೂರ್ಣ ಬೆಂಬಲವಾಗಿರುತ್ತೇವೆ: ಪಿಣರಾಯಿ ವಿಜಯನ್‌ಗೆ ಸ್ಟ್ಯಾಲಿನ್ ಭರವಸೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಂಗಳವಾರ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿ, ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ರಾಜ್ಯದ ಸಂಪೂರ್ಣ ಬೆಂಬಲದ ಭರವಸೆ ನೀಡಿದ್ದಾರೆ.

ಪರಿಹಾರ ಚಟುವಟಿಕೆಗಳಿಗೆ 5 ಕೋಟಿ ರೂ.ಬಿಡುಗಡೆ ಮಾಡುವಂತೆ ತಮಿಳುನಾಡು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ರಕ್ಷಣಾ ಹಾಗೂ ಪರಿಹಾರ ಕಾರ್ಯದಲ್ಲಿ ನೆರವಾಗಲು ರಕ್ಷಣಾ ತಂಡವನ್ನು ಕೇರಳಕ್ಕೆ ಕಳುಹಿಸಲು ಅಧಿಕಾರಿಗಳಿಗೆ ಸ್ಟ್ಯಾಲಿನ್ ಸೂಚಿಸಿದರು.

ತಮಿಳುನಾಡು ತಂಡವು ರಾಜ್ಯ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ 20 ಸಿಬ್ಬಂದಿ, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ 20 ಮತ್ತು 10 ವೈದ್ಯರು ಮತ್ತು ದಾದಿಯರನ್ನು ಒಳಗೊಂಡಿರುತ್ತದೆ. ಅವರು ಕೇರಳ ರಕ್ಷಣಾ ತಂಡಗಳೊಂದಿಗೆ ಕೆಲಸ ಮಾಡಲಿದ್ದು, ತಕ್ಷಣ ನೆರೆಯ ರಾಜ್ಯಕ್ಕೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

2024-07-30 11:01 GMT

ಕೇರಳಕ್ಕೆ ಅಗತ್ಯವಿರುವ ಎಲ್ಲ ನೆರವು ಕರ್ನಾಟಕ ನೀಡಲಿದೆ: ಸಿದ್ದರಾಮಯ್ಯ

ಕೇರಳದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 90ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಕೇಳಿ ಆಘಾತವಾಯಿತು. ಇಂತಹ ಸಂಕಷ್ಟದ ಸಮಯದಲ್ಲಿ ನಾವು ನೆರೆಯ ಕೇರಳದ ಜನರೊಂದಿಗೆ ನಿಲ್ಲಲಿದ್ದೇವೆ. ನಮ್ಮ ಸರ್ಕಾರ ಕೇರಳಕ್ಕೆ ಅಗತ್ಯವಿರುವ ಎಲ್ಲ ನೆರವು ನೀಡಲಿದೆ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2024-07-30 10:55 GMT

Tags:    

Similar News