‘ಸಿಬಿಐ ಕೈಬೊಂಬೆಯಂತೆ ಕುಣಿಯುತ್ತಿದೆ’: ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಡಲು ಬಿಜೆಪಿ ‘ಪಿತೂರಿ’: ಎಎಪಿ ಆರೋಪ

Update: 2024-08-25 05:53 GMT
ಅರವಿಂದ್ ಕೇಜ್ರಿವಾಲ್
Click the Play button to listen to article

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಡಲು ಸಂಚು ನಡೆಸುತ್ತಿದೆ ಎಂದು ಬಿಜೆಪಿ ಮತ್ತು ಕೇಂದ್ರ ತನಿಖಾ ಸಂಸ್ಥೆ ಸಿಬಿಐಗೆ ಆಮ್ ಆದ್ಮಿ ಪಕ್ಷ ಶನಿವಾರ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಎಎಪಿ ಹಿರಿಯ ನಾಯಕ ಮನೀಶ್ ಸಿಸೋಡಿಯಾ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯೆ ಸಲ್ಲಿಸಲು ಸಿಬಿಐ ಸುಪ್ರೀಂ ಕೋರ್ಟ್‌ನಿಂದ ಸಮಯ ಕೇಳಿದೆ. ಜಾಮೀನು ಅರ್ಜಿಯ ಕುರಿತು ತನ್ನ ಅಫಿಡೆಂಡ್‌ ಸಿದ್ಧವಾಗಿಲ್ಲ ಎಂದು ಸಿಬಿಐ ನ್ಯಾಯಾಲಯದಲ್ಲಿ ಹೇಳಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಡಲು ಬಿಜೆಪಿ ಸೂಚನೆಯಂತೆ ಸಿಬಿಐ ಬೊಂಬೆಯಂತೆ ನೃತ್ಯ ಮಾಡುತ್ತಿದೆ. ಆದರೆ ಮುಂದೊಂದು ದಿನ ಸತ್ಯ ಮತ್ತು ಪ್ರಾಮಾಣಿಕತೆ ಗೆಲ್ಲಲಿದೆ ಎಂದು ಎಎಪಿ ಹಿರಿಯ ನಾಯಕ ಪ್ರತಿಪಾದಿಸಿದ್ದಾರೆ. ಸಂಸ್ಥೆಗಳು ರಾಜಕೀಯ ತಾಳಕ್ಕೆ ತಕ್ಕಂತೆ ಕುಣಿಯಬಹುದು ಆದರೆ ಸಂವಿಧಾನ ಮತ್ತು ನ್ಯಾಯ ಸತ್ಯದ ಜೊತೆಗಿದೆ ಎಂದು  ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. 

ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಕುರಿತು ಅಫಿಡವಿಟ್ ಸಲ್ಲಿಸಲು ಸಂಸ್ಥೆ ಹೆಚ್ಚಿನ ಸಮಯವನ್ನು ಕೋರಿದ ಬಳಿಕ  ಸುಪ್ರೀಂ ಕೋರ್ಟ್ ಶುಕ್ರವಾರ ಸೆಪ್ಟೆಂಬರ್ 5 ರವರೆಗೆ ವಿಚಾರಣೆಯನ್ನು ಮುಂದೂಡಿದೆ. ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಪ್ರಕರಣದಲ್ಲಿ ಸಿಬಿಐನಿಂದ ತನ್ನ ಬಂಧನವನ್ನು ಪ್ರಶ್ನಿಸಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಕೇಜ್ರಿವಾಲ್ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಸಲ್ಲಿಸಿದ ವಿವರವಾದ ಅಫಿಡವಿಟ್‌ನಲ್ಲಿ ಸಿಬಿಐ, ಈಗ ರದ್ದಾದ ಅಬಕಾರಿ ನೀತಿಯ ರಚನೆಯಲ್ಲಿನ ಎಲ್ಲಾ ನಿರ್ಣಾಯಕ ನಿರ್ಧಾರಗಳನ್ನು ಅಂದಿನ ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ಸಹಭಾಗಿತ್ವದಲ್ಲಿ ದೆಹಲಿ ಮುಖ್ಯಮಂತ್ರಿಯವರ ಆದೇಶದ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದೆ.

 ಎಎಪಿ ನಾಯಕ ಮತ್ತು ದೆಹಲಿ ಸಚಿವ ಅತಿಶಿ ಕೂಡ ಸಿಬಿಐ ವಿರುದ್ಧ ವಾಗ್ದಾಳಿ ನಡೆಸಿದ್ದು, "ಸಿಬಿಐ ಅಫಿಡವಿಟ್ ಸಿದ್ಧವಾಗಿದೆ ಆದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಇನ್ನೂ ಕೆಲವು ದಿನಗಳವರೆಗೆ ಜೈಲಿನಲ್ಲಿಡಲು ಸುಪ್ರೀಂ ಕೋರ್ಟ್‌ನಲ್ಲಿ ಸಿಬಿಐ  ಸುಳ್ಳು ಹೇಳಿದೆ ಎಂದು ಅವರು ಆರೋಪಿಸಿದರು.

ಕೇಜ್ರಿವಾಲ್ ಅವರ ಜಾಮೀನು ವಿಚಾರಣೆಯ ಸಂದರ್ಭದಲ್ಲಿ, ಬಿಜೆಪಿಯ ಸಿಬಿಐ ಅಫಿಡವಿಟ್ ಸಲ್ಲಿಸಲು ಒಂದು ವಾರದ ಸಮಯವನ್ನು ಕೇಳಿದೆ ಆದರೆ ಅದು ಇಂದು ಪ್ರತಿ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂದು ಅವರು ಆರೋಪಿಸಿದರು.

ನಿನ್ನೆಯಷ್ಟೇ ಸಿಬಿಐಗೆ ಒಂದು ವಾರದ ಕಾಲಾವಕಾಶ ಬೇಕಿದ್ದ ಅಫಿಡವಿಟ್ ಇಂದು ಎಲ್ಲ ಪತ್ರಿಕೆಗಳಲ್ಲಿ ಮುದ್ರಣವಾಗಿದ್ದು ಹೇಗೆ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಇನ್ನೂ ಕೆಲವು ದಿನ ಜೈಲಿನಲ್ಲಿಡಲು ಸಿಬಿಐ ಷಡ್ಯಂತ್ರ ನಡೆಸುತ್ತಿದೆ ಎಂದಿದ್ದಾಳೆ. ಅವರು ಎಷ್ಟೇ ಪ್ರಯತ್ನಿಸಿದರೂ ಅಂತಿಮವಾಗಿ ಸತ್ಯವೇ ಮೇಲುಗೈ ಸಾಧಿಸುತ್ತದೆ ಎಂದು ನಾನು ಬಿಜೆಪಿಗೆ ಹೇಳಬಯಸುತ್ತೇನೆ. ಸಿಬಿಐ ಮತ್ತು ಇಡಿ ಎಷ್ಟೇ ಪ್ರಯತ್ನಿಸಿದರೂ ಸುಪ್ರೀಂ ಕೋರ್ಟ್‌ನಿಂದ ಪರಿಹಾರ ಸಿಕ್ಕಿರುವುದನ್ನು ಮನೀಶ್ ಸಿಸೋಡಿಯಾ ಪ್ರಕರಣದಲ್ಲಿ ನೋಡಿದ್ದೇವೆ ಎಂದು ಅತಿಶಿ ಹೇಳಿದ್ದಾರೆ.

ಕೇಜ್ರಿವಾಲ್ ಶೀಘ್ರದಲ್ಲೇ ಜೈಲಿನಿಂದ ಹೊರಬರುತ್ತಾರೆ ಮತ್ತು ಸಿಬಿಐ ಮತ್ತು ಇಡಿ ಮೂಲಕ ಬಿಜೆಪಿ ನಡೆಸುತ್ತಿರುವ ಪ್ರತಿಯೊಂದು ಪಿತೂರಿ ವಿಫಲಗೊಳ್ಳುತ್ತದೆ ಎಂದು ಎಎಪಿ ವಿಶ್ವಾಸ ಹೊಂದಿದೆ ಎಂದು ಅವರು ಹೇಳಿದರು.

ಈ ಮಧ್ಯೆ  ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಕಪೂರ್ ಅವರು ಎಎಪಿ ಅರಾಜಕ ಪಕ್ಷವಾಗಿದೆ.  ಅವರ ನಾಯಕರು ತನಿಖಾ ಸಂಸ್ಥೆಗಳು ತಮ್ಮ ಇಚ್ಛೆಗೆ ಅನುಗುಣವಾಗಿ ಕೆಲಸ ಮಾಡಬೇಕೆಂದು ನಿರೀಕ್ಷಿಸುತ್ತಾರೆ. ಎಎಪಿ ನಾಯಕರಿಗೆ ಯಾವುದೇ ತನಿಖಾ ಸಂಸ್ಥೆಯು ಅವರ ಜಾಮೀನು ಅರ್ಜಿ ಅಥವಾ ವಿವಾದವನ್ನು ವಿರೋಧಿಸುತ್ತದೆ ಅಥವಾ ಅವರು ಕೋರಿದ ಪರಿಹಾರವನ್ನು ಅನುಮತಿಸದ ನ್ಯಾಯಾಲಯವು ಬಿಜೆಪಿಯ ಆಜ್ಞೆಯ ಮೇರೆಗೆ ಪಕ್ಷಪಾತಿಯಾಗಿದೆ ಎಂದು ಅವರು ಹೇಳಿದರು.

ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿಸಲ್ಪಟ್ಟ ಕೇಜ್ರಿವಾಲ್ ಅವರು ಜೂನ್ 20 ರಂದು ವಿಚಾರಣಾ ನ್ಯಾಯಾಲಯದಿಂದ ಜಾಮೀನು ಪಡೆದರು. ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶವನ್ನು ದೆಹಲಿ ಹೈಕೋರ್ಟ್ ಜೂನ್ 21 ರಂದು ರದ್ದುಗೊಳಿಸಿತು. ಕೇಜ್ರಿವಾಲ್ ಅವರು ಹೈಕೋರ್ಟ್ ಆದೇಶದ ವಿರುದ್ಧ ಜೂನ್ 22 ರಂದು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದರು ಆದರೆ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಜೂನ್ 26 ರಂದು ಬಂಧಿಸಿದರು. ಬಳಿಕ ಇಡಿ ಸಲ್ಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜುಲೈ 11 ರಂದು ಕೇಜ್ರಿವಾಲ್‌ಗೆ ಜಾಮೀನು ನೀಡಿತು. 

Tags:    

Similar News