Pahalgam Terror Attack | ಕಾಶ್ಮೀರದಲ್ಲಿ ಎನ್ಐಎ ತಂಡ; ಪರಿಹಾರ ಘೋಷಿಸಿದ ಜಮ್ಮು-ಕಾಶ್ಮೀರ ಸರ್ಕಾರ

Update: 2025-04-22 14:57 GMT
Live Updates - Page 2
2025-04-23 07:00 GMT

ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ಬಳಿಕ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅವರ ಬಂಧನಕ್ಕೆ ಬಹುಮಾನ ಘೋಷಿಸಿದ್ದಾರೆ. 

2025-04-23 06:50 GMT

ಕೂದಲೆಳೆಯಲ್ಲಿ ಪಾರಾದ ಮಾಜಿ ಬಳ್ಳಾರಿ ವಿವಿ ಸಿಂಡಿಕೇಟ್‌ ಸಮಿತಿಯ ಸದಸ್ಯರ ಕುಟುಂಬ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿಯ ಸಂದರ್ಭದಲ್ಲಿ ಜಮ್ಮು ಕಾಶ್ಮೀರ ಪ್ರವಾಸದಲ್ಲಿದ್ದ ಬಳ್ಳಾರಿ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸಿಂಡಿಕೇಟ್‌ ಸಮಿತಿ ಮಾಜಿ ಸದಸ್ಯ ಟಿ.ಎಂ.ರಾಜಶೇಖರ ಅವರು ಮತ್ತು ಅವರ ಕುಟುಂಬದವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.


2025-04-23 06:41 GMT

ನಾಗರಿಕರ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ; ಆಂಟೋನಿಯೊ ಗುಟೆರೆಸ್

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ನಾಗರಿಕರ ಮೇಲಿನ ದಾಳಿ ಯಾವುದೇ ಸಂದರ್ಭದಲ್ಲೂ ಸ್ವೀಕಾರಾರ್ಹವಲ್ಲ ಎಂದು ಒತ್ತಿ ಹೇಳಿದ್ದಾರೆ.

2025-04-23 06:36 GMT

ಪ್ರವಾಸಿಗರ ನೆರವಿಗೆ ಸರ್ಕಾರದಿಂದ ಸಹಾಯವಾಣಿ

ಕಾಶ್ಮೀರದ ಪಾಹಲ್ಗಾಮ್‌ನ ಉಗ್ರರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ಸರ್ಕಾರವು ಪಯತ್ನಿಸುತ್ತಿದೆ. ಆದ್ದರಿಂದ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಸಹಾಯವಾಣಿ ಸಂಖ್ಯೆಗಳು ಹೀಗಿವೆ - 080-43344334, 080-43344335, 080-43344336, 080-43344342 2 ಎಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ ಸಹಾಯವಾಣಿಗೆ ನೀಡಬೇಕು ಎಂದು ಇಲಾಖೆ ತಿಳಿಸಿದೆ.

2025-04-23 06:23 GMT

ಅಪರಾಹ್ನ 3 ಗಂಟೆಗೆ ಬೆಂಗಳೂರು ತಲುಪಲಿರುವ ಭರತ್ ಭೂಷಣ್ ಮೃತದೇಹ

ಜಮ್ಮು ಮತ್ತು ಕಾಶ್ಮೀರದ ಪಹಲ್ಯಾಮ್ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಹಾವೇರಿಯ ಎಂಜಿನಿಯರ್ ಮತ್ತು ಬೆಂಗಳೂರಿನ ನಿವಾಸಿ ಭರತ್ ಭೂಷಣ್ (41) ಸೇರಿದ್ದಾರೆ. ಅವರ ಮೃತದೇಹವು ಬುಧವಾರ ಮಧ್ಯಾಹ್ನ 3 ಗಂಟೆಗೆ ಮುಂಬೈ ಮೂಲಕ ಬೆಂಗಳೂರಿಗೆ ವಿಮಾನ ಸಂಖ್ಯೆ 6E 3105 / 6E 5252 ರಲ್ಲಿ ಬಂದು ತಲುಪಲಿದೆ. ಇವರೊಂದಿಗೆ ಸುಜಾತಾ, ಹವಿಶ್, ಪ್ರೀತಂ ಚೆನ್ನವೀರಪ್ಪ ನರಸಿಂ, ಕೆ.ಜೆ.ಚಂದ್ರಶೇಖರ್, ಶ್ರೀಹರಿ ಪ್ರಸಾದ್ ಎನ್, ಎಂ. ದೀಪು, ಎಂ ಎಸ್ ರಾಹುಲ್ ಬಂದಿಳಿಯಲಿದ್ದಾರೆ.

2025-04-23 06:21 GMT

ಆರು ಗಂಟೆಗೆ ಶಿವಮೊಗ್ಗ ತಲುಪಲಿದೆ ಮಂಜುನಾಥ ರಾವ್‌ ಮೃತದೇಹ

ಜಮ್ಮು ಮತ್ತು ಕಾಶ್ಮೀರದ ಪಹಲಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ಗುಂಡಿಗೆ ಬಲಿಯಾಗಿದ್ದ ಶಿವಮೊಗ್ಗ ಜಿಲ್ಲೆಯ ಮಂಜುನಾಥ ರಾವ್ ಅವರ ಮೃತದೇಹ ವಿಮಾನ ಸಂಖ್ಯೆ 6E 3103 / 6E 5269 / 6E 7731 ನಲ್ಲಿ ನವದೆಹಲಿ ಮತ್ತು ಬೆಂಗಳೂರು ಮೂಲಕ ಬುಧವಾರ ಶಿವಮೊಗ್ಗಕ್ಕೆ ಸಂಜೆ 6:00 ಗಂಟೆಗೆ ತಲುಪಲಿದೆ. ಪಲ್ಲವಿ ಆರ್ (ಪತ್ನಿ, 40), ಅಭಿಜಯ (ಮಗ, 18) ಅವರು ಜೊತೆಗಿರಲಿದ್ದಾರೆ.

2025-04-23 04:04 GMT

ಕಾಶ್ಮೀರ ಬಂದ್‌ಗೆ ಕರೆ

 ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಕಾಶ್ಮೀರದ ವ್ಯಾಪಾರೋದ್ಯಮ ಮತ್ತು ಪ್ರವಾಸೋದ್ಯಮ ಸಂಘಟನೆಗಳು ಬುಧವಾರ ಸಂಪೂರ್ಣ ಬಂದ್‌ ಆಚರಿಸಲು ಕರೆ ನೀಡಿವೆ.

ದಾಳಿಯಿಂದಾಗಿ ಇಡೀ ಕಾಶ್ಮೀರ ಆಘಾತಕ್ಕೆ ಒಳಗಾಗಿದೆ. ದಾಳಿಯನ್ನು ವ್ಯಾಪಕವಾಗಿ ಖಂಡಿಸಲಾಗಿದೆ. ಕಾಶ್ಮೀರ ವಾಣಿಜ್ಯೋದ್ಯಮ ಸಂಘಟನೆ (ಸಿಸಿಐಕೆ), ಜಮ್ಮು ಮತ್ತು ಕಾಶ್ಮೀರ ಹೋಟೆಲ್ ಮಾಲೀಕರ ಕ್ಲಬ್ (ಜೆಕೆೆಎಚ್‌ಸಿ), ಎಲ್ಲ ಪ್ರಮುಖ ಟ್ರಾವೆಲ್ ಸಂಘಟನೆಗಳು, ರೆಸ್ಟೋರೆಂಟ್ ಮಾಲೀಕರು, ನಾಗರಿಕ ಸಮುದಾಯದ ಸಂಘಟನೆಗಳು ಕಾಶ್ಮೀರ ಬಂದ್‌ಗೆ ಕರೆ ನೀಡಿವೆ.

2025-04-23 04:00 GMT

ಕಾಶ್ಮೀರದಲ್ಲಿ ಕೊಪ್ಪಳದ 20 ಮಂದಿ ಸುರಕ್ಷಿತ

ಕಾಶ್ಮೀರದಲ್ಲಿ ಕೊಪ್ಪಳದ 20 ಮಂದಿ ಸುರಕ್ಷಿತ

ಕಾಶ್ಮೀರದಲ್ಲಿ ಕೊಪ್ಪಳದ 20 ಮಂದಿ ಸಿಲುಕಿರುವ ಮಾಹಿತಿ ಇದೆ.. ಸೋಮವಾರ ಕೊಪ್ಪಳದಿಂದ ನಾಲ್ಕು ಕುಟುಂಬಗಳ 20 ಸದಸ್ಯರು ಜಮ್ಮು-ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಇವರೆಲ್ಲ ಉಗ್ರರ ದಾಳಿ ನಡೆದ ಸ್ಥಳದಿಂದ 80 ಕಿಲೋ ಮೀಟರ್ ದೂರದಲ್ಲಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ . ಅವರನ್ನು ಮರಳಿ ಕರೆತರಲು ಸರ್ಕಾರ ಸಿದ್ಧತೆ

2025-04-22 18:21 GMT

ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಕ್ರಮ: ಸಿದ್ದ ರಾಮಯ್ಯ ಭರವಸೆ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರಡ.

ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ.ಉ ಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ ಎಂದು ಅವರು‌ ವಿವರಿಸಿದ್ದಾರೆ.

ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು‌ ಸಿಎಂ‌ ಹೇಳಿದ್ದಾರೆ.


2025-04-22 17:59 GMT

ಸೌದಿ ಅರೇಬಿಯಾ ಪ್ರವಾಸ‌ ಮೊಟಕು; ಪ್ರಧಾನಿ‌ ಮೋದಿ ವಾಪಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ‌ನರೇಂದ್ರ ಮೋದಿ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ, ಇಂದು ರಾತ್ರಿ ಭಾರತಕ್ಕೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಸೌದಿ ಅರೇಬಿಯಾ ಆಯೋಜಿಸಿದ್ದ ಅಧಿಕೃತ ಭೋಜನಕೂಟದಲ್ಲಿ‌ ಭಾಗಿಯಾಗುವುದನ್ನು ತಪ್ಪಿಸಿಕೊಂಡು ತಮ್ಮ ಪ್ರವಾಸ ಮೊಟಕುಗೊಳಿಸಲು ನಿರ್ಧರಿಸಿದ್ದಾರೆ. ಅವರು ಇಂದು(ಮಂಗಳವಾರ) ರಾತ್ರಿ ಭಾರತಕ್ಕೆ ಮರಳಲಿದ್ದಾರೆ. ಅಧಿಕೃತವಾಗಿ ಬುಧವಾರ ರಾತ್ರಿಯೇ ಹಿಂತಿರುಗಬೇಕಿತ್ತು, ಆದರೆ ಈಗ ಬುಧವಾರ ಮುಂಜಾನೆ ಭಾರತಕ್ಕೆ ಆಗಮಿಸಲಿದ್ದಾರೆ.

Tags:    

Similar News