ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಅಡ್ಡಿಪಡಿಸಿದರೆ ಪ್ರಿಯಾಂಕ್ ಖರ್ಗೆಗೆ ತಕ್ಕ ಪಾಠ: ಮೋಹನ್ ಗೌಡ
ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥ ಸಂಚಲನ ನಡೆಸುವ ವಿಚಾರವಾಗಿ ಸರ್ಕಾರದ ಹೊಸ ನಿಯಮಗಳು ಚರ್ಚೆಗೆ ಗ್ರಾಸವಾಗಿವೆ. ಸರ್ಕಾರಿ ಜಾಗಗಳಲ್ಲಿ ಯಾವುದೇ ಸಂಘ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯಗೊಳಿಸಿರುವುದಕ್ಕೆ ಹಿಂದೂ ಜನ ಜಾಗೃತಿ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು 'ದ ಫೆಡರಲ್ ಕರ್ನಾಟಕ'ಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಸಮಿತಿಯ ರಾಜ್ಯ ವಕ್ತಾರರಾದ ಮೋಹನ್ ಗೌಡ ಅವರು ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ಅಲ್ಲದೆ, ಸಚಿವ ಪ್ರಿಯಾಂಕ್ ಖರ್ಗೆಯನ್ನು ಅವರ ತವರು ಕ್ಷೇತ್ರ ಚಿತ್ತಾಪುರದಲ್ಲಿಯೇ ರಾಜಕೀಯವಾಗಿ ಸೋಲಿಸುವುದಾಗಿ ನೇರ ಸವಾಲು ಹಾಕಿದ್ದಾರೆ. ಈ ಕುರಿತ ಸಂಪೂರ್ಣ ಸಂದರ್ಶನ ಇಲ್ಲಿದೆ.
By : The Federal
Update: 2025-10-27 04:16 GMT