ಕಮಲ್​ ಹಾಸನ್​ 'ಥಗ್ ಲೈಫ್' ಸಿನೆಮಾಗೆ ಕರ್ನಾಟಕದಲ್ಲಿ ನಿಷೇಧ? ಫಿಲ್ಮ್ ಚೇಂಬರ್ ಅಧ್ಯಕ್ಷರ ಸುಳಿವು?

'ಫೆಡರಲ್​ ಕರ್ನಾಟಕ'ದ ಜತೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಕಮಲ್ ಹಾಸನ್ ತಿಳಿದುಕೊಂಡು ಮಾತನಾಡಬೇಕಿತ್ತು. ಈ ಹೇಳಿಕೆಯು ಕನ್ನಡಿಗರ ಭಾವನೆಗೆ ಧಕ್ಕೆ ತಂದಿದೆ" ಎಂದು ಅವರು ಹೇಳಿದ್ದಾರೆ.;

Update: 2025-05-28 12:59 GMT

ಕನ್ನಡದ ಭಾಷೆಯ ತಮಿಳು ನಟ ಕಮಲ್ ಹಾಸನ್‌ರ ನೀಡಿರುವ ವಿವಾದಾತ್ಮಕ ಹೇಳಿಕೆ ಕರ್ನಾಟಕದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಂ. ನರಸಿಂಹಲು ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಕಮಲ್‌ರ ಹೇಳಿಕೆಯಿಂದ ಕನ್ನಡ ಜನತೆಗೆ ಬೇಸರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

'ಫೆಡರಲ್​ ಕರ್ನಾಟಕ'ದ ಜತೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಕಮಲ್ ಹಾಸನ್ ತಿಳಿದುಕೊಂಡು ಮಾತನಾಡಬೇಕಿತ್ತು. ಈ ಹೇಳಿಕೆಯು ಕನ್ನಡಿಗರ ಭಾವನೆಗೆ ಧಕ್ಕೆ ತಂದಿದೆ" ಎಂದು ಅವರು ಹೇಳಿದ್ದಾರೆ.

Full View

ಕನ್ನಡಪರ ಸಂಘಟನೆಗಳು ಕಮಲ್‌ರ ಮುಂಬರುವ ಚಿತ್ರ ಥಗ್ ಲೈಫ್ ಅನ್ನು ಕರ್ನಾಟಕದಲ್ಲಿ ಪ್ರದರ್ಶಿಸದಂತೆ ನಿಷೇಧ ಹೇರಬೇಕೆಂದು ಒತ್ತಾಯಿಸಿವೆ. ಈ ಸಂಬಂಧ 10 ಕನ್ನಡ ಸಂಘಟನೆಗಳು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಪತ್ರ ಸಲ್ಲಿಸಿವೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮಂಡಳಿಯು, ನಾಳೆ (ಮೇ 29) ವಿಶೇಷ ಸಭೆ ಕರೆದಿದ್ದು, ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ನಾಳೆಯ ಸಭೆಯಲ್ಲಿ ಚಿತ್ರದ ನಿಷೇಧದ ಬಗ್ಗೆ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ" ಎಂದು ನರಸಿಂಹಲು ಹೇಳಿದ್ದಾರೆ.

ಸರ್ಕಾರ ಮತ್ತು ಹೋರಾಟಗಾರರಿಂದ ಖಂಡನೆ

ಕಮಲ್ ಅವರ ಹೇಳಿಕೆಗೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷವಾಗಿ ಎಕ್ಸ್​ನಲ್ಲಿ, ಕಮಲ್​ ಹಾಸನ್​ ಹೇಳಿಕೆಗೆ ಖಂಡನೆಗಳು ವ್ಯಕ್ತಗೊಂಡಿವೆ. ಕನ್ನಡಪರ ಹೋರಾಟಗಾರ ಸಾ.ರಾ.ಗೋವಿಂದು ಅವರು, "ಕಮಲ್‌ಗೆ ಕನ್ನಡದ ಇತಿಹಾಸದ ಜ್ಞಾನವಿಲ್ಲ. ಮೂಲತಃ ಮಲಯಾಳಿಯಾಗಿರುವ ಕಮಲ್, ತಮಿಳುನಾಡಿನವರನ್ನು ಮೆಚ್ಚಿಸಲು ಈ ರೀತಿ ಹಗುರವಾಗಿ ಮಾತನಾಡಿರುವುದು ಕನ್ನಡಿಗರ ಶ್ರೇಷ್ಠತೆಗೆ ಪೂರಕವಲ್ಲ. ಅವರು ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕು,'' ಎಂದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ಹೇಳಿಕೆಯನ್ನು ಖಂಡಿಸಿದ್ದು, " ಕಮಲ್‌ ಹೇಳಿಕೆ ತಪ್ಪು ಮಾಹಿತಿಯಿಂದ ಕೂಡಿದ್ದು, ಕನ್ನಡಿಗರ ಭಾವನೆಗೆ ಧಕ್ಕೆ ತಂದಿದೆ,'' ಎಂದಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಸಹ, "ಕನ್ನಡಕ್ಕೆ ಅವಮಾನ ಮಾಡುವವರಿಗೆ ರಾಜ್ಯದಲ್ಲಿ ಸ್ಥಾನವಿಲ್ಲ. ಕಮಲ್ ಕ್ಷಮೆ ಕೇಳದಿದ್ದರೆ, ಚಿತ್ರದ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.

ಕನ್ನಡ ಸಂಘಟನೆಗಳು 'ಥಗ್ ಲೈಫ್' ಚಿತ್ರದ ಬಿಡುಗಡೆಯನ್ನು ರಾಜ್ಯದಲ್ಲಿ ವಿರೋಧಿಸುವ ಎಚ್ಚರಿಕೆ ನೀಡಿವೆ. "ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆ ತಂದವರಿಗೆ ಇಲ್ಲಿ ಸ್ಥಾನವಿಲ್ಲ" ಎಂದು ಕನ್ನಡಪರ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ, ರಾಜ್ಯವ್ಯಾಪಿ ಪ್ರತಿಭಟನೆಗಳಿಗೆ ಸಂಘಟನೆಗಳು ಸಜ್ಜಾಗಿವೆ.  

Tags:    

Similar News