ನೇಹಾ ಕೊಲೆ ಪ್ರಕರಣ | ಮಗಳ ಕೊಲೆ ಹಿಂದೆ ಶಾಸಕರ ಕೈವಾಡ: ನೇಹಾ ತಂದೆ ಆರೋಪ

ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆಯ ಬಗ್ಗೆ ಶ್ರೀರಾಮಸೇನೆ ಅಷ್ಟೇ ಅಲ್ಲದೆ ಸಾರ್ವಜನಿಕರಲ್ಲಿಯೂ ಹಲವು ಪ್ರಶ್ನೆ ಮೂಡಿಸಿದೆ.;

Update: 2025-02-03 06:33 GMT
ಮಗಳು ನೇಹಾ ಜೊತೆಗೆ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ನಿರಂಜನ್‌ ಹಿರೇಮಠ್‌, ತಮ್ಮ ಮಗಳು ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು, ನನ್ನ ಮಗಳ ಹತ್ಯೆ ನಡೆದು 9 ತಿಂಗಳು ಕಳೆದರೂ ನ್ಯಾಯ ಸಿಗುತ್ತಿಲ್ಲ. ಈ‌ ತನಿಖೆಯ ಹಾದಿ‌ ಎತ್ತ ಸಾಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆಯ ಬಗ್ಗೆ ಶ್ರೀರಾಮಸೇನೆ ಅಷ್ಟೇ ಅಲ್ಲದೆ ಸಾರ್ವಜನಿಕರಲ್ಲಿಯೂ ಹಲವು ಪ್ರಶ್ನೆ ಮೂಡಿಸಿದೆ. ಆದ್ದರಿಂದ ಸಿಬಿಐ ತನಿಖೆ ಆಗಬೇಕು. ಕೊಲೆ ಕೇಸ್​ನಲ್ಲಿ ಶಾಸಕರ ಕೈವಾಡ ಇರುವುದು ಸತ್ಯ ಎಂದು ಗಂಭೀರ ಆರೋಪ ಮಾಡಿದ್ದಾರೆ. 

2024ರ ಏಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿ ನೇಹಾಳ ಕೊಲೆಯಾಗಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ನಿರಂಜನ ಹಿರೇಮಠ ಅವರ ಮಗಳು ನೇಹಾಳನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್ ನೇಹಾಳನ್ನು ಕೊಲೆ ಮಾಡಿದ್ದನು. ಕೊಲೆ‌ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೊಲೆ ಆರೋಪಿ ಫಯಾಜ್​ನನ್ನು ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧಿಸಿದ್ದರು.

Tags:    

Similar News