ಕಮಲ್ ನಾಥ್ ನಂತರ, ಮನೀಶ್ ತಿವಾರಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಸಾಧ್ಯತೆ

Update: 2024-02-18 07:25 GMT

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಬಿಜೆಪಿಗೆ ಸೇರುತ್ತಾರೆ ಎನ್ನುವ ವದಂತಿಗಳು ಹರಡಿದ ಒಂದು ದಿನದ ನಂತರ ಹಿರಿಯ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಕೂಡ ಆಢಳಿತರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ ಎನ್ನುವ ಕೆಲವು ವರದಿಗಳು ಬಂದಿವೆ.

ವರದಿಗಳ ಪ್ರಕಾರ, ಪಂಜಾಬ್‌ನ ಆನಂದಪುರ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದರಾಗಿರುವ ತಿವಾರಿ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಪಡೆದು ಲುಧಿಯಾನ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ತಿವಾರಿ ಅವರು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ.

ಹಿರಿಯ ನಾಯಕ ಅಶೋಕ್ ಚವಾಣ್ ಅವರು ಪಕ್ಷ ತೊರೆದಿದ ಬಳಿಕ ಮತ್ತೆ ಚುರುಕಾಗಿದ್ದ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಂದು ಹೊಡೆತ ಎದುರಿಸಬೇಕಾಗುತ್ತದೆ.

Tags:    

Similar News