Bangalore Stampede | ಕಾಲ್ತುಳಿತ ಪ್ರಕರಣ ; ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ ಮಾನವ ಹಕ್ಕು ಆಯೋಗ
ಆರ್ ಸಿಬಿ ವಿಜಯೋತ್ಸವದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಮಾನವ ಹಕ್ಕು ಆಯೋಗ ಮೂರು ಸ್ವಯಂಪ್ರೇರಿತ ಹಾಗೂ ಎರಡು 2 ಪ್ರತ್ಯೇಕ ದೂರುಗಳನ್ನು ದಾಖಲಿಕೊಂಡಿತ್ತು.;
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಾನವ ಹಕ್ಕು ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ.
ಆರ್ ಸಿಬಿ ವಿಜಯೋತ್ಸವದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಮಾನವ ಹಕ್ಕು ಆಯೋಗ ಮೂರು ಸ್ವಯಂಪ್ರೇರಿತ ಹಾಗೂ ಎರಡು 2 ಪ್ರತ್ಯೇಕ ದೂರುಗಳನ್ನು ದಾಖಲಿಕೊಂಡಿತ್ತು.
ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆಯೋಗವು ಕಾಲ್ತುಳಿತಕ್ಕೆ ಕಾರಣವಾದ ಅಂಶಗಳನ್ನು ಕಲೆ ಹಾಕಿತ್ತು. ಅಲ್ಲದೇ ಆಸ್ಪತ್ರೆಗಳಿಗೆ ತೆರಳಿ ಗಾಯಾಳುಗಳಿಂದ ಮಾಹಿತಿ ಪಡೆದು ಸರ್ಕಾರಕ್ಕೆ ಸಲ್ಲಿಸಿರುವ ತನ್ನ ಮಧ್ಯಂತರ ವರದಿಯಲ್ಲಿ ಪರಿಹಾರ ಹೆಚ್ಚಳದ ಶಿಫಾರಸು ಮಾಡಿತ್ತು.
ಕಾಲ್ತುಳಿತ ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣ ಎಂಬ ದೂರು ಆಧರಿಸಿ ಜೂ. 6 ರಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸ್ಥಳಕ್ಕೆ ಭೇಟಿ ನೀಡಿ ಆಯೋಗ ಪರಿಶೀಲನೆ ನಡೆಸಿತ್ತು.
ಘಟನೆಯಲ್ಲಿ 11 ಮಂದಿ ಮೃತಪಟ್ಟು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.
ವರದಿಯ ಅಂಶಗಳೇನು?
ಪ್ರಜಾಪ್ರಭುತ್ವ ಹಾಗೂ ನಾಗರಿಕ ಸಮಾಜದಲ್ಲಿ ಅಗತ್ಯ ಮೂಲ ಸೌಕರ್ಯ, ಸಾರ್ವಜನಿಕ ಸುರಕ್ಷತೆ ಕಲ್ಪಿಸುವುದು ಅತ್ಯಂತ ಪ್ರಮುಖ ಜವಾಬ್ದಾರಿ.
ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಯಲ್ಲಿರುವ ಎಲ್ಲಾ ಗಾಯಾಳುಗಳನ್ನು ಭೇಟಿ ಮಾಡಿ ಮಾಹಿತಿ ಪಡೆದಿತ್ತು. ವೈದ್ಯಾಧಿಕಾರಿಗಳಿಗೆ ಎಲ್ಲ ವೈದ್ಯಕೀಯ ನೆರವು ನೀಡಲು ಸೂಚಿಸಿತ್ತು.
ಆಸ್ಪತ್ರೆಯಲ್ಲಿ ದಾಖಲಾದ ಗಾಯಾಳುಗಳು ಮತ್ತು ವೈದ್ಯರು ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುವುದೆಂದು ಮನವಿ ಮಾಡಿದ್ದನ್ನು ಆಯೋಗ ಉಲ್ಲೇಖಿಸಿದೆ.
ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳನ್ನು ಸರ್ಕಾರ ಈಗಾಗಲೇ ಘೋಷಿಸಿದೆ. ಹೆಚ್ಚುವರಿಯಾಗಿ ಇನ್ನೂ 15 ಲಕ್ಷ ರೂ. ಗಳನ್ನು ಸೇರಿಸಿ ಒಟ್ಟು 25 ಲಕ್ಷ ರೂ.ಗಳನ್ನು ನೀಡುವಂತೆ ಸೂಚಿಸಿದೆ.