ಬಿಹಾರದಲ್ಲಿ ಚುನಾವಣಾ ಮುನ್ನಾ ಕೊಡುಗೆ; : ಸಿಎಂ ನಿತೀಶ್ ಕುಮಾರ್ ಅವರಿಂದ ಸಾಮಾಜಿಕ ಭದ್ರತಾ ಪಿಂಚಣಿ 1,100 ರೂಪಾಯಿ ಏರಿಕೆ!

ಈ ವರ್ಷದ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಸಿಎಂ ನಿತೀಶ್ ಕುಮಾರ್ ಅವರ ಈ ಬಂಪರ್ ಕೊಡುಗೆಯು 'ಚುನಾವಣಾ ಬಂಪರ್​'' ಎಂದು ವಿಶ್ಲೇಷಿಸಲಾಗುತ್ತಿದೆ.;

Update: 2025-06-21 11:02 GMT

ಬಿಹಾರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ಮುಖ್ಯಮಂತ್ರಿ 'ನಿತೀಶ್ ಕುಮಾರ್' ರಾಜ್ಯದ ಜನತೆಗೆ ಬಂಪರ್ ಕೊಡುಗೆ ಘೋಷಿಸಿದ್ದಾರೆ. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿಯಲ್ಲಿ ವಿಧವೆಯರು, ಹಿರಿಯ ನಾಗರಿಕರು ಮತ್ತು ವಿಕಲಾಂಗರಿಗೆ ನೀಡಲಾಗುತ್ತಿದ್ದ ಮಾಸಿಕ ಪಿಂಚಣಿ ಮೊತ್ತವನ್ನು 400 ರೂಪಾಯಿಯಿಂದ 1,100 ರೂಪಾಯಿಗೆ ಏರಿಕೆ ಮಾಡಲಾಗಿದೆ. ಈ ಮಹತ್ವದ ನಿರ್ಧಾರವು ರಾಜ್ಯದ ಲಕ್ಷಾಂತರ ಫಲಾನುಭವಿಗಳ ಬದುಕಿಗೆ ಹೊಸ ಆಶಾಕಿರಣ ಮೂಡಿಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಘೋಷಣೆ ಮಾಡಿದ್ದು, ಪರಿಷ್ಕೃತ ಪಿಂಚಣಿ ಮೊತ್ತವು 'ಜುಲೈ ತಿಂಗಳಿಂದಲೇ' ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಪ್ರತಿ ತಿಂಗಳ 10ನೇ ತಾರೀಕಿನಂದು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ 1,100 ರೂಪಾಯಿ ಜಮೆಯಾಗಲಿದೆ. ಈ ನಿರ್ಧಾರದಿಂದಾಗಿ ಬರೋಬ್ಬರಿ 1,09,69,255 ಫಲಾನುಭವಿಗಳಿಗೆ' ನೇರವಾಗಿ ಅನುಕೂಲವಾಗಲಿದೆ ಎಂದು ಸಿಎಂ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಬಿಹಾರ ಭೇಟಿಯ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

''ಐತಿಹಾಸಿಕ ನಿರ್ಧಾರ': ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಪ್ರಶಂಸೆ'

ನಿತೀಶ್ ಕುಮಾರ್ ಅವರ ಈ ನಿರ್ಧಾರವನ್ನು ಬಿಹಾರದ ಉಪಮುಖ್ಯಮಂತ್ರಿ 'ಸಾಮ್ರಾಟ್ ಚೌಧರಿ' ಅವರು ಸ್ವಾಗತಿಸಿದ್ದಾರೆ. 'ರಾಜ್ಯದ ವಿಧವೆಯರು, ಹಿರಿಯ ನಾಗರಿಕರು ಮತ್ತು ವಿಕಲಾಂಗರ ಪಿಂಚಣಿ ಮೊತ್ತವನ್ನು ಮುಖ್ಯಮಂತ್ರಿಗಳು ಏರಿಕೆ ಮಾಡಿರುವುದು ಒಂದು 'ಐತಿಹಾಸಿಕ ದಿನ'ವಾಗಿದೆ. ಇದಕ್ಕಾಗಿ ನಾನು ಮುಖ್ಯಮಂತ್ರಿಯವರನ್ನು ಅಭಿನಂದಿಸುತ್ತೇನೆ' ಎಂದು ಅವರು ಹೇಳಿದ್ದಾರೆ.

ಚುನಾವಣಾ ಬಂಪರ್​ ಕೊಡುಗೆ

ಈ ವರ್ಷದ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಸಿಎಂ ನಿತೀಶ್ ಕುಮಾರ್ ಅವರ ಈ ಬಂಪರ್ ಕೊಡುಗೆಯು 'ಚುನಾವಣಾ ಬಂಪರ್​'' ಎಂದು ವಿಶ್ಲೇಷಿಸಲಾಗುತ್ತಿದೆ. ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಳವು ಲಕ್ಷಾಂತರ ಮತದಾರರನ್ನು ನೇರವಾಗಿ ತಲುಪಲಿದ್ದು, ಇದು ಮುಂಬರುವ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟಕ್ಕೆ ಲಾಭ ತಂದುಕೊಡುವ ತಂತ್ರಗಾರಿಕೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಪಿಂಚಣಿದಾರರಿಗೆ ಆರ್ಥಿಕ ನೆರವು ನೀಡುವುದರ ಜೊತೆಗೆ, ಇದು ಸರ್ಕಾರದ ಜನಪರ ನಿಲುವನ್ನು ಪ್ರತಿಬಿಂಬಿಸುವ ಪ್ರಯತ್ನವೂ ಆಗಿದೆ.

Tags:    

Similar News