ಕ್ಯಾರೇ ಎನ್ನದ ಬೀದರ್ ಮಂದಿ
ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೀದರ್ ಜಿಲ್ಲೆಯಲ್ಲಿ ಬೆಂಬಲ ಸಿಗಲಿಲ್ಲ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ತೆಲಂಗಾಣ, ಮಹಾರಾಷ್ಟ್ರದ ಸಾರಿಗೆ ಸಂಸ್ಥೆಯ ಬಸ್ಗಳು, ಆಟೋ, ಟಂಟಂ ಸೇರಿದಂತೆ ಎಲ್ಲ ಪ್ರಕಾರದ ವಾಹನಗಳು ಯಥಾಪ್ರಕಾರ ಸಂಚರಿಸುತ್ತಿವೆ.