ಕೆಂಪುಕೋಟೆ ಸ್ಫೋಟ: ಸಾವಿನ ಸಂಖ್ಯೆ 8ಕ್ಕೆ ಏರಿಕೆ, 24ಕ್ಕೂ ಹೆಚ್ಚು ಮಂದಿಗೆ ಗಾಯ
ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಈ ಪ್ರಬಲ ಸ್ಫೋಟದಲ್ಲಿ 24ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿರುವುದರಿಂದ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಮೂಲಗಳು ತಿಳಿಸಿವೆ.
Next Story

