
ಜಾತಿ ಗಣತಿ ವರದಿ ಬಗ್ಗೆ ಕೆಲವೇ ಕ್ಷಣಗಳಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ
ಜಾತಿ ಗಣತಿ ವರದಿ ಬಗ್ಗೆ ಕೆಲವೇ ಕ್ಷಣಗಳಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭವಾಗಲಿದೆ. ಜಾತಿ ಗಣತಿ ವರದಿ ಅಂಗೀಕಾರಕ್ಕೆ ತಡೆ ಹಾಕಿದ್ದ ಹೈಕಮಾಂಡ್ನಿಂದ ಹೊಸ ಸಮೀಕ್ಷೆಗೆ ಸೂಚನೆ ನೀಡಿದ ಹಿನ್ನೆಲೆ ಗುರುವಾರ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲಾ ಸಚಿವರ ಅಭಿಪ್ರಾಯವನ್ನು ಸಿ.ಎಂ ಸಿದ್ದರಾಮಯ್ಯ ಪಡೆಯಲಿದ್ದಾರೆ.
ಜಾತಿ ಗಣತಿ ವರದಿ ಬಗ್ಗೆ ಒಕ್ಕಲಿಗ ಮತ್ತು ಲಿಂಗಾಯತ ಸಚಿವರಿಂದ ವರದಿಗೆ ವಿರೋಧ ಇದ್ದರೆ ಉಳಿದ ಸಚಿವರು ಪರ ಇದ್ದಾರೆ. ಇದೀಗ ಹೈಕಮಾಂಡ್ ಸೂಚನೆ ಹಿನ್ನಲೆ ಮುಂದೆ ಯಾವ ರೀತಿ ಸಮೀಕ್ಷೆ ಏನು ಮಾಡಬೇಕು ಎಂದು ಪ್ರತಿ ಸಚಿವರ ಅಭಿಪ್ರಾಯವನ್ನು ಸಿದ್ದರಾಮಯ್ಯ ಅವರು ಪಡೆಯಲಿದ್ದಾರೆ.
Next Story